‘ಬರದಿಂದ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ರಾಜ್ಯದಾದ್ಯಂತ ಸುತ್ತಾಡಿ ರೈತರಿಗೆ ಸಕಾಲಕ್ಕೆ ನೆರವು ಕೊಡಿಸುವ ಕೆಲಸ ಮಾಡಬೇಕು. ಆದರೆ, ಅವರು ಬೆಂಗಳೂರು, ಹಾಸನ, ಮಂಡ್ಯ, ರಾಮನಗರ ಬಿಟ್ಟರೆ ಬೇರೆಲ್ಲೂ ಹೋಗುತ್ತಿಲ್ಲ. ಶೇ 80ರಷ್ಟು ಅನುದಾನ ಆ ಜಿಲ್ಲೆಗಳಿಗಷ್ಟೇ ಬಿಡುಗಡೆ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ರಾಜ್ಯದಲ್ಲಿದೆ ಎಂಬುದನ್ನು ಮರೆತು ಬಿಟ್ಟಿದ್ದಾರೆ. ಉತ್ತರ ಕರ್ನಾಟಕದ ಜನರ ಸಮಸ್ಯೆಗಳೆಂದರೆ ಸರ್ಕಾರಕ್ಕೆ ಅಲರ್ಜಿಯಾಗಿದೆ’ ಎಂದರು.