ಮಕ್ಕಳು ಸಾಕಷ್ಟು ನೀರು ಕುಡಿಯಲು ಅನುಕೂಲವಾಗುವಂತೆ ಕೇರಳದ ಶಾಲೆಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿದೆ. ಕೇರಳದಿಂದ ಪ್ರೇರಣೆಗೊಂಡಿರುವ ರಾಜ್ಯ ಸರ್ಕಾರ ಈ ಮಾದರಿಯನ್ನು ಇಲ್ಲಿಯೂ ಜಾರಿಗೆ ತಂದಿದೆ. ಕೇರಳದ ಈ ಮಾದರಿಯನ್ನು ರಾಜ್ಯದಲ್ಲಿಯೂ ಜಾರಿಗೆ ತರುವ ಇಂಗಿತವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಫೇಸ್ಬುಕ್ ಪೇಜ್ನಲ್ಲಿ ವ್ಯಕ್ತಪಡಿಸಿದ್ದಾರೆ.