<p><strong>ಬೆಳಗಾವಿ</strong>: ‘ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೆರೆಯಿಂದಾಗಿ ನೆಲೆ ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು’ ಎಂದು ಜೆಡಿಎಸ್ ಮುಖಂಡ, ಶಾಸಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.</p>.<p>ಸಾಂಬ್ರಾ ವಿಮಾನನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರವು ತನ್ನ ಪಾಲಿನ ಪರಿಹಾರ ನೀಡುವಾಗ ತಾರತಮ್ಯ ನಿಲುವು ತಾಳಬಾರದು. ಅಗತ್ಯ ಅನುದಾನ ನೀಡಿ ಜನರಿಗೆ ನೆರವಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ನಾನು ಜ್ವರದಿಂದ ಬಳಲುತ್ತಿದ್ದೆ. ಇನ್ನೂ ಸಂಪೂರ್ಣ ಗುಣಮುಖವಾಗಿಲ್ಲ. ಆದರೆ, ಪ್ರವಾಹಪೀಡಿತ ಜನತೆಯ ಸಂಕಷ್ಟ ಕಂಡು ಮನೆಯಲ್ಲಿ ಇರಲು ಆಗಲಿಲ್ಲ. ಬೆಳಗಾವಿ ಪ್ರವಾಸ ಮುಗಿಸಿ, ಭಾನುವಾರ ಕೊಡಗಿಗೆ ಹೋಗುತ್ತೇನೆ. ಸಂತ್ರಸ್ತರ ಅಳಲು ಕೇಳುತ್ತೇನೆ’ ಎಂದರು.</p>.<p>‘ಅಗತ್ಯಬಿದ್ದರೆ ಸಂತ್ರಸ್ತರಿಗೆ ಆಹಾರ ಧಾನ್ಯ ವ್ಯವಸ್ಥೆ ಮಾಡುತ್ತೇನೆ. ಮಧುರೈನಿಂದ 10ಸಾವಿರ ಹೊದಿಕೆಗಳನ್ನು (ರಗ್ಗು) ತರಿಸಿ ವಿತರಿಸಲಾಗುವುದು’ ಎಂದು ಹೇಳಿದರು.</p>.<p>‘ಪ್ರವಾಹ ಪರಿಸ್ಥಿತಿ ನಿಭಾಯಿಸುವ ಜವಾಬ್ದಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲಿದೆ. ಅಧಿಕಾರಿಗಳಿಂದ ಸರಿಯಾಗಿ ಕೆಲಸ ಮಾಡಿಸಿಕೊಳ್ಳಬೇಕು. ನಾನು ಯಾವುದೇ ರಾಜಕೀಯ ಮಾಡುವುದಕ್ಕೋಸ್ಕರ ನೆರೆ ಸಮೀಕ್ಷೆ ನಡೆಸುತ್ತಿಲ್ಲ. ಜನರಿಗೆ ಒಳ್ಳೆಯದಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕು’ ಎಂದರು.</p>.<p>ಬಳಿಕ, ಬಳ್ಳಾರಿ ನಾಲೆಯಿಂದ ಜಲಾವೃತವಾಗಿರುವ ಜಮೀನುಗಳು, ಬಡಾವಣೆಗಳನ್ನು ವೀಕ್ಷಿಸಿದರು. ಬಳ್ಳಾರಿ ನಾಲೆಯಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿ ಬಂದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಲ್ಲಪ್ಪ–ರತ್ನವ್ವ ದಂಪತಿಯ ಆರೋಗ್ಯ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೆರೆಯಿಂದಾಗಿ ನೆಲೆ ಕಳೆದುಕೊಂಡ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು’ ಎಂದು ಜೆಡಿಎಸ್ ಮುಖಂಡ, ಶಾಸಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.</p>.<p>ಸಾಂಬ್ರಾ ವಿಮಾನನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರವು ತನ್ನ ಪಾಲಿನ ಪರಿಹಾರ ನೀಡುವಾಗ ತಾರತಮ್ಯ ನಿಲುವು ತಾಳಬಾರದು. ಅಗತ್ಯ ಅನುದಾನ ನೀಡಿ ಜನರಿಗೆ ನೆರವಾಗಬೇಕು’ ಎಂದು ಒತ್ತಾಯಿಸಿದರು.</p>.<p>‘ನಾನು ಜ್ವರದಿಂದ ಬಳಲುತ್ತಿದ್ದೆ. ಇನ್ನೂ ಸಂಪೂರ್ಣ ಗುಣಮುಖವಾಗಿಲ್ಲ. ಆದರೆ, ಪ್ರವಾಹಪೀಡಿತ ಜನತೆಯ ಸಂಕಷ್ಟ ಕಂಡು ಮನೆಯಲ್ಲಿ ಇರಲು ಆಗಲಿಲ್ಲ. ಬೆಳಗಾವಿ ಪ್ರವಾಸ ಮುಗಿಸಿ, ಭಾನುವಾರ ಕೊಡಗಿಗೆ ಹೋಗುತ್ತೇನೆ. ಸಂತ್ರಸ್ತರ ಅಳಲು ಕೇಳುತ್ತೇನೆ’ ಎಂದರು.</p>.<p>‘ಅಗತ್ಯಬಿದ್ದರೆ ಸಂತ್ರಸ್ತರಿಗೆ ಆಹಾರ ಧಾನ್ಯ ವ್ಯವಸ್ಥೆ ಮಾಡುತ್ತೇನೆ. ಮಧುರೈನಿಂದ 10ಸಾವಿರ ಹೊದಿಕೆಗಳನ್ನು (ರಗ್ಗು) ತರಿಸಿ ವಿತರಿಸಲಾಗುವುದು’ ಎಂದು ಹೇಳಿದರು.</p>.<p>‘ಪ್ರವಾಹ ಪರಿಸ್ಥಿತಿ ನಿಭಾಯಿಸುವ ಜವಾಬ್ದಾರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲಿದೆ. ಅಧಿಕಾರಿಗಳಿಂದ ಸರಿಯಾಗಿ ಕೆಲಸ ಮಾಡಿಸಿಕೊಳ್ಳಬೇಕು. ನಾನು ಯಾವುದೇ ರಾಜಕೀಯ ಮಾಡುವುದಕ್ಕೋಸ್ಕರ ನೆರೆ ಸಮೀಕ್ಷೆ ನಡೆಸುತ್ತಿಲ್ಲ. ಜನರಿಗೆ ಒಳ್ಳೆಯದಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಬೇಕು’ ಎಂದರು.</p>.<p>ಬಳಿಕ, ಬಳ್ಳಾರಿ ನಾಲೆಯಿಂದ ಜಲಾವೃತವಾಗಿರುವ ಜಮೀನುಗಳು, ಬಡಾವಣೆಗಳನ್ನು ವೀಕ್ಷಿಸಿದರು. ಬಳ್ಳಾರಿ ನಾಲೆಯಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿ ಬಂದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಲ್ಲಪ್ಪ–ರತ್ನವ್ವ ದಂಪತಿಯ ಆರೋಗ್ಯ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>