ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯವರು ಹೇಳಿದಾಕ್ಷಣ ಸರ್ಕಾರ ಬೀಳಲ್ಲ: ಸತೀಶ ಜಾರಕಿಹೊಳಿ ತಿರುಗೇಟು

Last Updated 25 ಡಿಸೆಂಬರ್ 2018, 17:00 IST
ಅಕ್ಷರ ಗಾತ್ರ

ಬೆಳಗಾವಿ: ಬಿಜೆಪಿಯವರು ಹೇಳಿದ ತಕ್ಷಣ ಸರ್ಕಾರ ಬೀಳಲ್ಲ. ಶಾಸಕರು ಇರುತ್ತಾರೆ. ಅವರು ಸರ್ಕಾರ ರಚಿಸುತ್ತಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಳೆದ 6 ತಿಂಗಳಿನಿಂದಲೂ ಅವರು (ಬಿಜೆಪಿ) ಇದನ್ನೇ ಹೇಳಿಕೊಂಡು ಬರುತ್ತಿದ್ದಾರೆ. ಆದರೆ, ಸರ್ಕಾರ ಬಿದ್ದಿಲ್ಲ. ಯಾರೂ ರಾಜೀನಾಮೆ ಕೊಡಲ್ಲ. ಸಚಿವ ಸಂಪುಟ ವಿಸ್ತರಣೆಯಾದಾಗ ಕೆಲವರಿಗೆ ಅಸಮಾಧಾನ ಉಂಟಾಗುವುದು ಸ್ವಾಭಾವಿಕ. ಅಸಮಾಧಾನಗೊಂಡವರನ್ನು ಪಕ್ಷದ ವರಿಷ್ಠರು ಮಾತನಾಡಿಸಿ, ಸಮಾಧಾನ ಪಡಿಸುತ್ತಾರೆ’ ಎಂದು ಹೇಳಿದರು.

‘ಸಹೋದರ ರಮೇಶ ಜಾರಕಿಹೊಳಿ ಕೂಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ಅವರ ಜೊತೆ ನಾನೂ ಸೇರಿದಂತೆ ಪಕ್ಷದ ವರಿಷ್ಠರು ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳುತ್ತೇವೆ’ ಎಂದು ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT