ಎಂ.ಟಿ.ಬಿ.ನಾಗರಾಜ್ ಮುಂಬೈಗೆ ತೆರಳಿದ್ದು, ಹೋಟೆಲ್ನಲ್ಲಿ ತಂಗಿರುವ 12 ಮಂದಿ ಅತೃಪ್ತ ಶಾಸಕರಿಂದ ಒಗ್ಗಟ್ಟು ಪ್ರದರ್ಶನ, ರಾಮಲಿಂಗಾರೆಡ್ಡಿ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿಜೆಡಿಎಸ್ ಪಾಳಯದಲ್ಲಿ ಆತಂಕ ಮನೆಮಾಡಿತ್ತು. ಕ್ಷಣಕ್ಷಣಕ್ಕೂ ರಾಜಕೀಯ ಚಿತ್ರಣ ಬದಲಾಗುತ್ತಿದ್ದು, ಮುಂದೇನಾಗುವುದೊ ಎಂಬ ಲೆಕ್ಕಾಚಾರ ಬಿಟ್ಟರೆ ಬೇರೇನೂ ಕಾಣಲಿಲ್ಲ.