ಪ್ರಶಸ್ತಿ ಸ್ವೀಕರಿಸಿ ಬಳಿಕ ಮಾತನಾಡಿದ ನಿರ್ಮಲಮ್ಮ,‘ಜೈನ ಸಮಾಜದ ಹೆಣ್ಣು ಮಕ್ಕಳಿಗಾಗಿ ಒಂದು ಸಂಸ್ಥೆ ಕಟ್ಟಬೇಕೆಂಬ ಆಶಯದಿಂದ ಚಕ್ರೇಶ್ವರಿ ಮಹಿಳಾ ಸಮಾಜವನ್ನು ಸ್ಥಾಪಿಸಿದೆ. ಸಮಾಜದ ಅಭಿವೃದ್ಧಿಯಲ್ಲಿಜೈನ ಮೈತ್ರಿ ಕೂಟದ ಡಿ.ಸುರೇಂದ್ರ ಕುಮಾರ್ ಅವರೂ ಶ್ರಮಿಸಿದ್ದಾರೆ. ಅವರಿಗೆ ನಾನು ಚಿರಋಣಿ’ ಎಂದರು. ಕೂಟದ ಕಾರ್ಯಕಾರಿ ಸಮಿತಿ ಅಧ್ಯಕ್ಷೆ ಅನಿತಾ ಸುರೇಂದ್ರಕುಮಾರ್,‘ದಕ್ಷಿಣ ಕನ್ನಡ ಜಿಲ್ಲೆಯ ಜೈನ ಸಮುದಾಯವನ್ನು ಒಗ್ಗೂಡಿಸುವ ಉದ್ದೇಶದಿಂದ ಸಂಸ್ಥೆಯನ್ನು ಹುಟ್ಟುಹಾಕಲಾಯಿತು.