‘ಜಲ ಮಾಲಿನ್ಯ ಹಾಗೂ ವಾಯು ಮಾಲಿನ್ಯಕ್ಕೆ ಆಸ್ಪದ ಕಲ್ಪಿಸುವ ಯಾವುದೇ ಕೈಗಾರಿಕಾ ಕಾರ್ಯಾಚರಣೆಗೆ ಅವಕಾಶ ಇಲ್ಲ. 2020ರ ಜೂನ್ 30ರವರೆಗೆ ಕೈಗಾರಿಕೆಯನ್ನು ಮುಂದುವರಿಸಲು ನೀಡಿದ್ದ ಅನುಮತಿಯನ್ನು ಹಿಂಪಡೆಯುವಂತೆ ರಾಷ್ಟ್ರಿಯ ಹಸಿರು ನ್ಯಾಯಮಂಡಳಿಯು ಆದೇಶ ಮಾಡಿತ್ತು. ಅದು ತಕ್ಷಣದಿಂದಲೇ ಜಾರಿಗೆ ಬರಲಿದೆ. ಈ ಕಾರ್ಖಾನೆಯನ್ನು ಮುಚ್ಚುವಂತೆ ಮಂಡಳಿಯು 2012–13ರಲ್ಲಿ ಮಾಡಿದ್ದ ಆದೇಶವನ್ನು ಎನ್ಜಿಟಿ ಇತ್ತೀಚೆಗೆ ಎತ್ತಿ ಹಿಡಿದಿತ್ತು.