ಈ ಸಂಬಂಧ ರಾಜ್ಯ ಚುನಾವಣಾ ಆಯುಕ್ತರಿಗೆ ಸುದೀರ್ಘ ಪತ್ರ ಬರೆದಿರುವ ಪಾಟೀಲರು, ‘ಸಂವಿಧಾನದ ಅನುಚ್ಛೇದ 243ಇ(3)ರ ಅನ್ವಯ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಕಾಯ್ದೆಯಂತೆ, ಗ್ರಾಮ ಪಂಚಾಯಿತಿಗಳಿಗೆ ಅವಧಿ ಪೂರ್ಣಗೊಳ್ಳುವ ಮೊದಲು ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸುವುದು ಕಡ್ಡಾಯ. ಸಂವಿಧಾನ ಮತ್ತು ಕಾಯ್ದೆ ಧಿಕ್ಕರಿಸಿ ಚುನಾವಣಾ ಆಯೋಗ ಕೆಲಸ ಮಾಡಬಾರದು’ ಎಂದಿದ್ದಾರೆ.