<p><strong>ಬಳ್ಳಾರಿ: </strong>ಕೋವಿಡ್-19 ನಿಯಂತ್ರಣ ಸಲುವಾಗಿ ಜಾರಿಗೆ ತಂದಿರುವ ಲಾಕ್ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಸಂಜೆ ತುರ್ತು ಪತ್ರಿಕಾ ಗೋಷ್ಠಿ ನಡೆಸಿದ ಅವರು, ತಾರಾನಗರ ಪಂಚಾಯ್ತಿ ಸದಸ್ಯ ಮಂಜುನಾಥ್, ಅಲ್ತಾಫ್ ಬಂಧಿತರು. ಪರಾರಿಯಾಗಿರುವ ನಿಂಗಪ್ಪ, ಗಣೇಶ್ ಅವರನ್ನು ಬಂಧಿಸಲಾಗುವುದು ಎಂದರು.</p>.<p>‘ಇಡೀ ದೇಶವೇ ಲಾಕ್ನ್ ಆಗಿದ್ದರೂ ಆರೋಪಿಗಳು ಸಂಡೂರು ತಾಲ್ಲೂಕಿನ ತಾರಾನಗರ ಚೆಕ್ ಪೋಸ್ಟ್ ಬಸ್ ನಿಲ್ದಾಣದ ಬಳಿ ಗುಂಪುಗೂಡಿದ್ದರು. ಹಾಗೆ ಮಾಡಬಾರದು ಎಂದು ಸೂಚಿಸಿದ ಪೊಲೀಸರನ್ನು ನಿಂದಿಸಿ ಹಲ್ಲೆ ನಡೆಸಿದರು. ಘಟನೆಯನ್ನು ಚಿತ್ರೀಕರಿಸುತ್ತಿದ್ದ ಕ್ಯಾಮರಾವನ್ನು ಜಖಂಗೊಳಿಸಿದರು’ ಎಂದು ಅವರು ತಿಳಿಸಿದರು.</p>.<p><strong>117 ವಾಹನ ವಶ: </strong>ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದವರ 117 ವಾಹನಗಳನ್ನು ವಶಪಡಿಸಿಕೊಂಡಿದ್ದು, ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಾಪಸ್ ನೀಡುವುದಿಲ್ಲ ಎಂದು ಬಾಬಾ ಹೇಳಿದರು.</p>.<p>ಮರಿಯಮ್ಮನಹಳ್ಳಿ ಹೋಬಳಿಯ ಗೊಲ್ಲರಹಳ್ಳಿಯಲ್ಲಿ ಭಾನುವಾರ ಕಾಳಿಕಾದೇವಿ ರಥೋತ್ಸವ ನಡೆಸಿದ. 15 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ಕೋವಿಡ್-19 ನಿಯಂತ್ರಣ ಸಲುವಾಗಿ ಜಾರಿಗೆ ತಂದಿರುವ ಲಾಕ್ಡೌನ್ ನಿಯಮವನ್ನು ಉಲ್ಲಂಘನೆ ಮಾಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಸಂಜೆ ತುರ್ತು ಪತ್ರಿಕಾ ಗೋಷ್ಠಿ ನಡೆಸಿದ ಅವರು, ತಾರಾನಗರ ಪಂಚಾಯ್ತಿ ಸದಸ್ಯ ಮಂಜುನಾಥ್, ಅಲ್ತಾಫ್ ಬಂಧಿತರು. ಪರಾರಿಯಾಗಿರುವ ನಿಂಗಪ್ಪ, ಗಣೇಶ್ ಅವರನ್ನು ಬಂಧಿಸಲಾಗುವುದು ಎಂದರು.</p>.<p>‘ಇಡೀ ದೇಶವೇ ಲಾಕ್ನ್ ಆಗಿದ್ದರೂ ಆರೋಪಿಗಳು ಸಂಡೂರು ತಾಲ್ಲೂಕಿನ ತಾರಾನಗರ ಚೆಕ್ ಪೋಸ್ಟ್ ಬಸ್ ನಿಲ್ದಾಣದ ಬಳಿ ಗುಂಪುಗೂಡಿದ್ದರು. ಹಾಗೆ ಮಾಡಬಾರದು ಎಂದು ಸೂಚಿಸಿದ ಪೊಲೀಸರನ್ನು ನಿಂದಿಸಿ ಹಲ್ಲೆ ನಡೆಸಿದರು. ಘಟನೆಯನ್ನು ಚಿತ್ರೀಕರಿಸುತ್ತಿದ್ದ ಕ್ಯಾಮರಾವನ್ನು ಜಖಂಗೊಳಿಸಿದರು’ ಎಂದು ಅವರು ತಿಳಿಸಿದರು.</p>.<p><strong>117 ವಾಹನ ವಶ: </strong>ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದವರ 117 ವಾಹನಗಳನ್ನು ವಶಪಡಿಸಿಕೊಂಡಿದ್ದು, ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಾಪಸ್ ನೀಡುವುದಿಲ್ಲ ಎಂದು ಬಾಬಾ ಹೇಳಿದರು.</p>.<p>ಮರಿಯಮ್ಮನಹಳ್ಳಿ ಹೋಬಳಿಯ ಗೊಲ್ಲರಹಳ್ಳಿಯಲ್ಲಿ ಭಾನುವಾರ ಕಾಳಿಕಾದೇವಿ ರಥೋತ್ಸವ ನಡೆಸಿದ. 15 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>