ಅರ್ಜಿದಾರರ ಪರ ವಾದ ಮಂಡಿಸಿದ ಚಂದ್ರಕಾಂತ ಆರ್. ಗೌಳೆ, ‘30 ತಿಂಗಳ ಅಧಿಕಾರವಧಿ ಒಳಗೆ ಅಧ್ಯಕ್ಷ– ಉಪಾಧ್ಯಕ್ಷರ ವಿರುದ್ಧ ಕೇಳಿಬರುವ ಭ್ರಷ್ಟಾಚಾರ, ಅಧಿಕಾರ ದುರುಪಯೋಗದ ಆರೋಪಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993ರ ಕಲಂ 49 ಉಪ ನಿಯಮ (2)ರ ಅನುಸಾರ ಅವಿಶ್ವಾಸ ಗೊತ್ತುವಳಿ ಮಂಡಿಸಬಹುದು ಎಂಬುದೇನೊ ಸರಿ. ಆದರೆ, ಈ ಕುರಿತಂತೆ ಯಾವ ರೀತಿ ಮುಂದಿನ ಕ್ರಮ ಜರುಗಿಸಬಹುದು ಎಂಬ ಬಗ್ಗೆ ಸರ್ಕಾರ ಇನ್ನೂ ಸೂಕ್ತ ನಿಯಮಗಳನ್ನು ರೂಪಿಸಿಲ್ಲ. ಹೀಗಾಗಿ ನೋಟಿಸ್ ಕಾನೂನು ಬಾಹಿರವಾಗಿದೆ’ ಎಂದರು.