ಲಾಕ್ಡೌನ್ ಆದಾಗಿನಿಂದ ಕೆಲವು ವಾರ್ಡ್ಗಳ ಸದಸ್ಯರು ಮನೆಯಲ್ಲಿಯೇ ಠಿಕಾಣಿ ಹೂಡಿದ್ದಾರೆ. ಮತ ಕೊಟ್ಟು ಗೆಲ್ಲಿಸಿದ ಮತದಾರರ ಸಮಸ್ಯೆಯನ್ನೇ ಆಲಿಸದ ಇವರು ತಮ್ಮ ಪಾಡಿಗೆ ಆರಾಮವಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾ.ಪಂ.ನ ಸದಸ್ಯರು ತಮ್ಮ ವಾರ್ಡಿನ ಜನರೊಂದಿಗೆ ನಿಕಟ ಸಂಪರ್ಕ ಹೊಂದಿ ಯಾರು ಕಡುಬಡವರು, ಯಾರಿಗೆ ಪಡಿತರ ಚೀಟಿ ದೊರೆತ್ತಿಲ್ಲ, ಯಾವ ಮನೆಯಲ್ಲಿ ವಿಕಲಚೇತನರು, ಅನಾರೋಗ್ಯ ಪೀಡಿತರು, ವಯೋವೃದ್ಧರು ಇದ್ದಾರೆ ಎಂಬುದರ ಬಗ್ಗೆ ಮಾಹಿತಿಯನ್ನು ಕಲೆಹಾಕಬೇಕು. ಆದರೆ ಇಲ್ಲಿನ ಗ್ರಾಮ ಪಂಚಾಯಿತಿ ಕೆಲವು ಸದಸ್ಯರುಗಳು ಜನಸಂಪರ್ಕದಿಂದಲೇ ದೂರವಿದ್ದಾರೆ.