ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದರೆ ಕಳೆದ ಜುಲೈ 18ರಂದು ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 2019–20ನೇ ಸಾಲಿನ ಕ್ರಿಯಾ ಯೋಜನೆಯಡಿಯಲ್ಲಿ ₹ 75 ಕೋಟಿಯನ್ನು ವಿವಿಧ ಕ್ಷೇತ್ರಗಳಿಗೆ ಹಂಚಲಾಗಿತ್ತು. ಆದರೆ ಈ ಅನುದಾನ ಬಳಕೆಯಾಗಿಲ್ಲ ಎಂಬ ಕಾರಣ ನೀಡಿ ಈ ಆದೇಶವನ್ನು ರದ್ದುಪಡಿಸಿ, ಮರು ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ. ಇದರಿಂದಾಗಿ ಕುಮಾರಸ್ವಾಮಿ ಅವರ ಟ್ವೀಟ್ಗೆ ಮಹತ್ವ ದೊರೆತಿದೆ.