<p><strong>ಬೆಂಗಳೂರು:</strong> ಬೆಂಗಳೂರು– ಪುಣೆ ನಡುವೆ ‘ಹಸಿರು ಹೆದ್ದಾರಿ’ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು.</p>.<p>ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಮಂಗಳವಾರದಿಂದ ಆರಂಭವಾದ ‘ಎಕ್ಸ್ಕಾನ್’ಗೆ ಚಾಲನೆ ನೀಡಿ ಮಾತನಾಡಿದರು.</p>.<p>ದೇಶದಲ್ಲಿ 22‘ಹಸಿರು ಹೆದ್ದಾರಿ’ಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಬೆಂಗಳೂರು– ಪುಣೆ ನಡುವಿನ ಹೆದ್ದಾರಿಯನ್ನೂ ಸೇರ್ಪಡೆ ಮಾಡಲಾಗಿದೆ. 600 ಕಿ.ಮೀ ಉದ್ದದ ಪುಣೆ ರಸ್ತೆಯನ್ನು ₹50 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದೇ ಮಾದರಿಯಲ್ಲಿ ಮುಂಬೈ– ದೆಹಲಿ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿದ್ದು, ಈ ಕೆಲಸ ಪೂರ್ಣಗೊಂಡರೆ ಈ ಎರಡು ನಗರಗಳ ನಡುವಿನ ಅಂತರ 250 ಕಿ.ಮೀ ಕಡಿಮೆ ಆಗಲಿದೆ ಎಂದು ವಿವರಿಸಿದರು.</p>.<p>ಹೆದ್ದಾರಿ ಕಾಮಗಾರಿ ಪೂರ್ಣಗೊಂಡರೆ ಮುಂಬೈನಿಂದ ದೆಹಲಿಯನ್ನು 12.30 ಗಂಟೆಗಳಲ್ಲಿ ತಲುಪಬಹುದು. ಬೆಂಗಳೂರು– ಪುಣೆ– ದೆಹಲಿ ಸಂಚಾರವೂ ಸರಳವಾಗಲಿದೆ ಎಂದರು.</p>.<p class="Subhead">ಅನುದಾನ ಹೆಚ್ಚಳ: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾರ್ಯಗಳಿಗೆ ವರ್ಷಕ್ಕೆ ₹2150 ಕೋಟಿ ನಿಗದಿಪಡಿಸಿದ್ದು, ಈ ಮೊತ್ತವನ್ನು ₹3990 ಕೋಟಿಗೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು– ಪುಣೆ ನಡುವೆ ‘ಹಸಿರು ಹೆದ್ದಾರಿ’ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು.</p>.<p>ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿಐಇಸಿ) ಮಂಗಳವಾರದಿಂದ ಆರಂಭವಾದ ‘ಎಕ್ಸ್ಕಾನ್’ಗೆ ಚಾಲನೆ ನೀಡಿ ಮಾತನಾಡಿದರು.</p>.<p>ದೇಶದಲ್ಲಿ 22‘ಹಸಿರು ಹೆದ್ದಾರಿ’ಗಳನ್ನು ನಿರ್ಮಿಸಲು ಉದ್ದೇಶಿಸಿದ್ದು, ಬೆಂಗಳೂರು– ಪುಣೆ ನಡುವಿನ ಹೆದ್ದಾರಿಯನ್ನೂ ಸೇರ್ಪಡೆ ಮಾಡಲಾಗಿದೆ. 600 ಕಿ.ಮೀ ಉದ್ದದ ಪುಣೆ ರಸ್ತೆಯನ್ನು ₹50 ಸಾವಿರ ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದೇ ಮಾದರಿಯಲ್ಲಿ ಮುಂಬೈ– ದೆಹಲಿ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿದ್ದು, ಈ ಕೆಲಸ ಪೂರ್ಣಗೊಂಡರೆ ಈ ಎರಡು ನಗರಗಳ ನಡುವಿನ ಅಂತರ 250 ಕಿ.ಮೀ ಕಡಿಮೆ ಆಗಲಿದೆ ಎಂದು ವಿವರಿಸಿದರು.</p>.<p>ಹೆದ್ದಾರಿ ಕಾಮಗಾರಿ ಪೂರ್ಣಗೊಂಡರೆ ಮುಂಬೈನಿಂದ ದೆಹಲಿಯನ್ನು 12.30 ಗಂಟೆಗಳಲ್ಲಿ ತಲುಪಬಹುದು. ಬೆಂಗಳೂರು– ಪುಣೆ– ದೆಹಲಿ ಸಂಚಾರವೂ ಸರಳವಾಗಲಿದೆ ಎಂದರು.</p>.<p class="Subhead">ಅನುದಾನ ಹೆಚ್ಚಳ: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾರ್ಯಗಳಿಗೆ ವರ್ಷಕ್ಕೆ ₹2150 ಕೋಟಿ ನಿಗದಿಪಡಿಸಿದ್ದು, ಈ ಮೊತ್ತವನ್ನು ₹3990 ಕೋಟಿಗೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>