‘ರಾಜ್ಯದ ಹಲವೆಡೆ ನದಿ ನೀರು, ನಾಲೆ, ಕಾಲುವೆಗಳಿಗೆ ಅಕ್ರಮವಾಗಿ ಪಂಪ್ ಸೆಟ್ ಅಳವಡಿಸಿ ನೀರು ಎತ್ತಲಾಗುತ್ತಿದೆ. ಕೆಲವು ಕಡೆ ಕೃತಕ ಕೆರೆ ನಿರ್ಮಿಸಿಕೊಂಡು ನೀರು ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ನಾಲೆ ಕೊನೆಯ ಭಾಗದ ರೈತರಿಗೆ ನೀರು ತಲುಪುತ್ತಿಲ್ಲ. ಇಂಥ ಅಕ್ರಮಗಳನ್ನು ಪತ್ತೆ ಮಾಡಿ, ತಪ್ಪಿತಸ್ಥರ ವಿರುದ್ಧ ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ನಿರ್ಣಯಿಸಲು ಸಮಿತಿ ರಚಿಸಲಾಗುವುದು’ ಎಂದರು.