<p><strong>ಬೆಂಗಳೂರು:</strong>ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಪಡೆಯಬೇಕು ಎಂಬ ಆಕಾಂಕ್ಷೆ ಹೊಂದಿದ್ದ ಸಾವಿರಾರು ಯುವಜನ ಅಲ್ಲಿ ಸಾಲುಗಟ್ಟಿ ನಿಂತಿದ್ದರು. ಅವರ ಕಂಗಳಲ್ಲಿ ಸಾಧಿಸುವ ಹಂಬಲವಿದ್ದರೆ, ಮನಸು ಮಾರ್ಗದರ್ಶನ ಬಯಸುತ್ತಿತ್ತು. ಗುರಿ ಸಾಧನೆಗೆ ಛಲ ಮೂಡಿಸುವ ಪ್ರೇರಣೆ ಬೇಕಿತ್ತು.</p>.<p>‘ಇನ್ಸೈಟ್ಸ್ ಐಎಎಸ್’ ಸಹಯೋಗದಲ್ಲಿ ಪ್ರಜಾವಾಣಿ– ಡೆಕ್ಕನ್ ಹೆರಾಲ್ಡ್ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಗೈಡಿಂಗ್ ಫೋರ್ಸ್’ ಕಾರ್ಯಾಗಾರವುಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಗುಟ್ಟು ತಿಳಿದುಕೊಳ್ಳುವಲ್ಲಿ ಅವರಿಗೆ ನೆರವಾಯಿತು. ಹಲವಾರುಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು, ಆಕಾಂಕ್ಷಿಗಳು ಮತ್ತು ಅವರ ಪೋಷಕರು ಕಾರ್ಯಾಗಾರದ ಪ್ರಯೋಜನ ಪಡೆದರು.</p>.<p>ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ, ವೈಟ್ಫೀಲ್ಡ್ ವಿಭಾಗದ ಡಿಸಿಪಿಎಂ.ಎನ್.ಅನುಚೇತ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್. ವೇಣುಗೋಪಾಲ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಸಲಹೆ ಮತ್ತು ಮಾರ್ಗದರ್ಶನ ನೀಡಿದರು.</p>.<p>ಪರೀಕ್ಷೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಎದುರಾಗುವ ಅಡೆ–ತಡೆಗಳನ್ನು ದಾಟುವುದು ಹೇಗೆ? ಕೊನೆಯವರೆಗೆ ಏಕಾಗ್ರತೆ ಕಾಪಾಡಿಕೊಳ್ಳಲು ಏನು ಮಾಡಬೇಕು? ಕೆಲಸ–ಕುಟುಂಬದ ಒತ್ತಡದ ನಡುವೆಯೇ ಪರೀಕ್ಷೆಗೆ ಸಿದ್ಧವಾಗುವುದು ಹೇಗೆ ? ಪರೀಕ್ಷೆ ಬರೆಯುವ ವೇಳೆ ನಮ್ಮ ಯೋಜನೆ ಹೇಗಿರಬೇಕು ಎಂಬಂತಹ ಹಲವು ಪ್ರಶ್ನೆಗಳನ್ನು ಆಕಾಂಕ್ಷಿಗಳು ಕೇಳಿದರು.ಇವುಗಳನ್ನು ಸಮಾಧಾನಚಿತ್ತದಿಂದ ಆಲಿಸಿದ ಪರಿಣತರು, ತಮ್ಮ ಅನುಭವ ಆಧಾರದ ಮೇಲೆ ಸಮರ್ಪಕ ಉತ್ತರ ನೀಡಿದರು.</p>.<p>‘ಇನ್ಸೈಟ್ಸ್’ ಐಎಎಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ನಿರ್ದೇಶಕ ಜಿ.ಬಿ. ವಿನಯ್ಕುಮಾರ್ ಪರೀಕ್ಷಾ ಸಿದ್ಧತೆಯ ಬಗ್ಗೆ ಮತ್ತು ತರಬೇತಿ ಅವಶ್ಯಕತೆ ಬಗ್ಗೆ ವಿವರಿಸಿದರು.</p>.<p>ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಇದ್ದ ಭಯ, ಗೊಂದಲ ಹೋಗಲಾಡಿಸುವಲ್ಲಿ ಮತ್ತು ಆತ್ಮವಿಶ್ವಾಸ ಮೂಡಿಸುವಲ್ಲಿ ಕಾರ್ಯಾಗಾರ ಸಾಕಷ್ಟು ಸಹಕಾರಿಯಾಯಿತು ಎಂದು ಆಕಾಂಕ್ಷಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಪಡೆಯಬೇಕು ಎಂಬ ಆಕಾಂಕ್ಷೆ ಹೊಂದಿದ್ದ ಸಾವಿರಾರು ಯುವಜನ ಅಲ್ಲಿ ಸಾಲುಗಟ್ಟಿ ನಿಂತಿದ್ದರು. ಅವರ ಕಂಗಳಲ್ಲಿ ಸಾಧಿಸುವ ಹಂಬಲವಿದ್ದರೆ, ಮನಸು ಮಾರ್ಗದರ್ಶನ ಬಯಸುತ್ತಿತ್ತು. ಗುರಿ ಸಾಧನೆಗೆ ಛಲ ಮೂಡಿಸುವ ಪ್ರೇರಣೆ ಬೇಕಿತ್ತು.</p>.<p>‘ಇನ್ಸೈಟ್ಸ್ ಐಎಎಸ್’ ಸಹಯೋಗದಲ್ಲಿ ಪ್ರಜಾವಾಣಿ– ಡೆಕ್ಕನ್ ಹೆರಾಲ್ಡ್ ವತಿಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ‘ಗೈಡಿಂಗ್ ಫೋರ್ಸ್’ ಕಾರ್ಯಾಗಾರವುಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಗುಟ್ಟು ತಿಳಿದುಕೊಳ್ಳುವಲ್ಲಿ ಅವರಿಗೆ ನೆರವಾಯಿತು. ಹಲವಾರುಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು, ಆಕಾಂಕ್ಷಿಗಳು ಮತ್ತು ಅವರ ಪೋಷಕರು ಕಾರ್ಯಾಗಾರದ ಪ್ರಯೋಜನ ಪಡೆದರು.</p>.<p>ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ, ವೈಟ್ಫೀಲ್ಡ್ ವಿಭಾಗದ ಡಿಸಿಪಿಎಂ.ಎನ್.ಅನುಚೇತ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್. ವೇಣುಗೋಪಾಲ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಸಲಹೆ ಮತ್ತು ಮಾರ್ಗದರ್ಶನ ನೀಡಿದರು.</p>.<p>ಪರೀಕ್ಷೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲಿ ಎದುರಾಗುವ ಅಡೆ–ತಡೆಗಳನ್ನು ದಾಟುವುದು ಹೇಗೆ? ಕೊನೆಯವರೆಗೆ ಏಕಾಗ್ರತೆ ಕಾಪಾಡಿಕೊಳ್ಳಲು ಏನು ಮಾಡಬೇಕು? ಕೆಲಸ–ಕುಟುಂಬದ ಒತ್ತಡದ ನಡುವೆಯೇ ಪರೀಕ್ಷೆಗೆ ಸಿದ್ಧವಾಗುವುದು ಹೇಗೆ ? ಪರೀಕ್ಷೆ ಬರೆಯುವ ವೇಳೆ ನಮ್ಮ ಯೋಜನೆ ಹೇಗಿರಬೇಕು ಎಂಬಂತಹ ಹಲವು ಪ್ರಶ್ನೆಗಳನ್ನು ಆಕಾಂಕ್ಷಿಗಳು ಕೇಳಿದರು.ಇವುಗಳನ್ನು ಸಮಾಧಾನಚಿತ್ತದಿಂದ ಆಲಿಸಿದ ಪರಿಣತರು, ತಮ್ಮ ಅನುಭವ ಆಧಾರದ ಮೇಲೆ ಸಮರ್ಪಕ ಉತ್ತರ ನೀಡಿದರು.</p>.<p>‘ಇನ್ಸೈಟ್ಸ್’ ಐಎಎಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ನಿರ್ದೇಶಕ ಜಿ.ಬಿ. ವಿನಯ್ಕುಮಾರ್ ಪರೀಕ್ಷಾ ಸಿದ್ಧತೆಯ ಬಗ್ಗೆ ಮತ್ತು ತರಬೇತಿ ಅವಶ್ಯಕತೆ ಬಗ್ಗೆ ವಿವರಿಸಿದರು.</p>.<p>ಸ್ಪರ್ಧಾತ್ಮಕ ಪರೀಕ್ಷೆ ಬಗ್ಗೆ ಇದ್ದ ಭಯ, ಗೊಂದಲ ಹೋಗಲಾಡಿಸುವಲ್ಲಿ ಮತ್ತು ಆತ್ಮವಿಶ್ವಾಸ ಮೂಡಿಸುವಲ್ಲಿ ಕಾರ್ಯಾಗಾರ ಸಾಕಷ್ಟು ಸಹಕಾರಿಯಾಯಿತು ಎಂದು ಆಕಾಂಕ್ಷಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>