ಬಡವರು ಮನೆಕಟ್ಟಿಕೊಳ್ಳಲು, ದೇವಸ್ಥಾನ ನಿರ್ಮಿಸಲು, ಸಣ್ಣಪುಟ್ಟ ಕೆಲಸಗಳಿಗೂ ಮರಳು ಸಿಗುತ್ತಿಲ್ಲ. ಅಕ್ರಮ ಮರಳು ಸಾಗಣೆಗೆ ಪೊಲೀಸರೇ ಸಾಥ್ ನೀಡುತ್ತಿದ್ದಾರೆ. ಒಂದು ಲೋಡ್ ಮರಳಿಗೆ ₨ 25 ಸಾವಿರ ವಸೂಲಿ ಮಾಡುತ್ತಾರೆ. ಇದನ್ನು ವಿರೋಧಿಸಿ ಹೊಸದುರ್ಗಠಾಣೆ ಮುಂದೆ ಪ್ರತಿಭಟನೆ ನಡೆಸುವಾಗ ಆವೇಶಕ್ಕೆ ಒಳಗಾಗಿ ಪೆಟ್ರೋಲ್ ಸುರಿದುಕೊಂಡೆ. ಸಹಿಸಲು ಸಾಧ್ಯವಾಗದಷ್ಟು ಕಣ್ಣು ಉರಿ. ಇಲ್ಲಿನ ವೈದ್ಯರ ಆರೈಕೆ ಬಳಿಕ ಸಹಜ ಸ್ಥಿತಿಗೆ ತಲುಪುತ್ತಿದೆ ಎಂದು ಗೂಳಿಹಟ್ಟಿ ಶೇಖರ್ ಪ್ರತಿಕ್ರಿಯೆ ನೀಡಿದರು.