<p><strong>ಕೊಪ್ಪ: </strong>ತಾಲ್ಲೂಕಿನ ಕಮ್ಮರಡಿ ಸಮೀಪದ ಕುಡಿನಲ್ಲಿ ಗ್ರಾಮದ ಉಮಾಮಹೇಶ್ವರ ದೇಗುಲದಲ್ಲಿ ಶುಕ್ರವಾರ ಪೂಜೆ, ಹೋಮ, ಹವನ ಕೈಂಕರ್ಯಗಳಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಪಾಲ್ಗೊಂಡಿದ್ದರು.</p>.<p>ಗಣೇಶ್ ಸೋಮಯಾಜಿ ಅವರು ಕೈಂಕರ್ಯಗಳ ನೇತೃತ್ವ ವಹಿಸಿದ್ದಾರೆ. ಶುಕ್ರವಾರ ಸಂಜೆ 5 ಗಂಟೆ ವೇಳೆಗೆ ಕುಮಾರಸ್ವಾಮಿ, ದೇವೇಗೌಡ, ರೇವಣ್ಣ ಅವರು ದೇಗುಲ ಪ್ರವೇಶಿಸಿದರು. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಜತೆಗಿದ್ದರು.</p>.<p>ದೇಗುಲದ ಆವರಣಕ್ಕೆ ಸಾರ್ವಜನಿಕರು ಮತ್ತು ಮಾಧ್ಯಮವದರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ದೇಗುಲದ ಸುತ್ತಮುತ್ತ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ‘ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ’ ಎಂಬ ನಾಮಫಲಕವನ್ನು ದೇಗುಲದ ಅನತಿ ದೂರದಲ್ಲಿ ಅಳವಡಿಸಲಾಗಿತ್ತು.</p>.<p>‘ವಿಶೇಷ ಪೂಜೆ, ಸಂಕಲ್ಪ ಇತರೆ ಕೈಂಕರ್ಯಗಳು ನಡೆಯಲಿವೆ. ರಾತ್ರಿ ತಲವಾನೆಯಲ್ಲಿ ವಾಸ್ತವ್ಯ ಹೂಡಿ, ಶನಿವಾರ ಪೂರ್ಣಾಹುತಿ ಕೈಂಕರ್ಯದಲ್ಲಿ ಪಾಲ್ಗೊಂಡು ತೆರಳುವರು’ ಎಂದು ಮೂಲಗಳು ತಿಳಿಸಿವೆ.</p>.<p>ಶಾಸಕ ಟಿ.ಡಿ. ರಾಜೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಆರೋಗ್ಯವೃದ್ಧಿಗೆ ಪ್ರಾರ್ಥಿಸಿ ಪೂಜಾ ಕೈಂಕರ್ಯ ನೆರವೇರಿಸಲಾಗುತ್ತಿದೆ. ಇದು ಅವರ ಕುಟುಂಬದ ಖಾಸಗಿ ಕಾರ್ಯಕ್ರಮ. ರಾಜಕೀಯ ತಳಕು ಹಾಕುವ ಅಗತ್ಯ ಇಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>‘ಭೇಟಿಗೆ ಪಕ್ಷದ ಸ್ಥಳೀಯ ಮುಖಂಡರಿಗೂ ಅವಕಾಶ ಇಲ್ಲ’ ಎಂದು ಪಕ್ಷದ ಮುಖಂಡರೊಬ್ಬರು ‘ಪ್ರಜಾವಾಣಿ’ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ: </strong>ತಾಲ್ಲೂಕಿನ ಕಮ್ಮರಡಿ ಸಮೀಪದ ಕುಡಿನಲ್ಲಿ ಗ್ರಾಮದ ಉಮಾಮಹೇಶ್ವರ ದೇಗುಲದಲ್ಲಿ ಶುಕ್ರವಾರ ಪೂಜೆ, ಹೋಮ, ಹವನ ಕೈಂಕರ್ಯಗಳಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಪಾಲ್ಗೊಂಡಿದ್ದರು.</p>.<p>ಗಣೇಶ್ ಸೋಮಯಾಜಿ ಅವರು ಕೈಂಕರ್ಯಗಳ ನೇತೃತ್ವ ವಹಿಸಿದ್ದಾರೆ. ಶುಕ್ರವಾರ ಸಂಜೆ 5 ಗಂಟೆ ವೇಳೆಗೆ ಕುಮಾರಸ್ವಾಮಿ, ದೇವೇಗೌಡ, ರೇವಣ್ಣ ಅವರು ದೇಗುಲ ಪ್ರವೇಶಿಸಿದರು. ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಜತೆಗಿದ್ದರು.</p>.<p>ದೇಗುಲದ ಆವರಣಕ್ಕೆ ಸಾರ್ವಜನಿಕರು ಮತ್ತು ಮಾಧ್ಯಮವದರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ದೇಗುಲದ ಸುತ್ತಮುತ್ತ ಪೊಲೀಸ್ ಭದ್ರತೆ ನಿಯೋಜಿಸಲಾಗಿತ್ತು. ‘ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ’ ಎಂಬ ನಾಮಫಲಕವನ್ನು ದೇಗುಲದ ಅನತಿ ದೂರದಲ್ಲಿ ಅಳವಡಿಸಲಾಗಿತ್ತು.</p>.<p>‘ವಿಶೇಷ ಪೂಜೆ, ಸಂಕಲ್ಪ ಇತರೆ ಕೈಂಕರ್ಯಗಳು ನಡೆಯಲಿವೆ. ರಾತ್ರಿ ತಲವಾನೆಯಲ್ಲಿ ವಾಸ್ತವ್ಯ ಹೂಡಿ, ಶನಿವಾರ ಪೂರ್ಣಾಹುತಿ ಕೈಂಕರ್ಯದಲ್ಲಿ ಪಾಲ್ಗೊಂಡು ತೆರಳುವರು’ ಎಂದು ಮೂಲಗಳು ತಿಳಿಸಿವೆ.</p>.<p>ಶಾಸಕ ಟಿ.ಡಿ. ರಾಜೇಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಆರೋಗ್ಯವೃದ್ಧಿಗೆ ಪ್ರಾರ್ಥಿಸಿ ಪೂಜಾ ಕೈಂಕರ್ಯ ನೆರವೇರಿಸಲಾಗುತ್ತಿದೆ. ಇದು ಅವರ ಕುಟುಂಬದ ಖಾಸಗಿ ಕಾರ್ಯಕ್ರಮ. ರಾಜಕೀಯ ತಳಕು ಹಾಕುವ ಅಗತ್ಯ ಇಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>‘ಭೇಟಿಗೆ ಪಕ್ಷದ ಸ್ಥಳೀಯ ಮುಖಂಡರಿಗೂ ಅವಕಾಶ ಇಲ್ಲ’ ಎಂದು ಪಕ್ಷದ ಮುಖಂಡರೊಬ್ಬರು ‘ಪ್ರಜಾವಾಣಿ’ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>