ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಬಾಬರಿ ಮಸೀದಿ ಧ್ವಂಸ ಮಾಡಿರುವುದು ತಪ್ಪು ಎಂದು ನ್ಯಾಯಾಲಯ ಹೇಳಿದೆ. ಹಾಗಿದ್ದ ಮೇಲೆ ಅಲ್ಪಸಂಖ್ಯಾತರಿಗೆ ಬೇರೆ ಮಸೀದಿ ನಿರ್ಮಾಣಕ್ಕೆ ಆರ್ಥಿಕ ಪರಿಹಾರವನ್ನೂ ಘೋಷಿಸಬೇಕಿತ್ತು. ಕೇಂದ್ರ ಸರ್ಕಾರವೇ ಪರಿಹಾರದ ಮೊತ್ತ ಪಾವತಿಸುವಂತೆ ನಿರ್ದೇಶನ ನೀಡಬಹುದಿತ್ತು’ ಎಂದು ಅಭಿಪ್ರಾಯಪಟ್ಟರು.