‘ದಾಖಲಾತಿ ಕೊಟ್ಟು 24 ಗಂಟೆಗಳಲ್ಲಿ ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಸಾಲಮನ್ನಾದ ಬಗ್ಗೆ ಮಾಹಿತಿಯೇ ಇಲ್ಲ. ನಾನು ಅಧಿಕಾರದಿಂದ ಕೆಳಗಿಳಿಯುವಾಗ ಬರೀ ಘೋಷಣೆ ಮಾಡಿಲ್ಲ. ಬದಲಿಗೆ ₹ 25 ಸಾವಿರ ಕೋಟಿ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ. ಅದರಲ್ಲಿ ₹ 800 ಕೋಟಿಯನ್ನು ಇನ್ನೂ ಬಿಡುಗಡೆ ಮಾಡದೆ ಇಟ್ಟುಕೊಂಡಿದ್ದಾರೆ. ನಾವು ರೈತರಿಂದ ಸರಳ ದಾಖಲೆ ಕೇಳಿದ್ದೆವು. ರೈತರ ದಾಖಲೆ ತಪ್ಪಿದ್ದರೆ ಸರಿಪಡಿಸುವುದು ಇಲಾಖೆಯ ಕೆಲಸ. ಅದನ್ನು ಬಿಟ್ಟು ಕೃಷಿ ಸಚಿವರು ನಾಲಿಗೆ ಇದೆ ಎಂದು ತೆವಲಿಗೆ ಸುಳ್ಳು ಹೇಳಿಕೊಂಡು ಓಡಾಡುವುದು ಬೇಡ’ ಎಂದು ಆಕ್ರೋಶ ವ್ಯಕ್ತಪಡಿಸಿದರು.