ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ಸ್ಥಗಿತ: ಕುಮಾರಸ್ವಾಮಿ ಆರೋಪ

Last Updated 9 ಮಾರ್ಚ್ 2020, 9:39 IST
ಅಕ್ಷರ ಗಾತ್ರ

ಮೈಸೂರು: ‘ಶಾದಿ ಭಾಗ್ಯ ಮಾತ್ರವಲ್ಲ; ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳು ಸ್ಥಗಿತಗೊಂಡಿವೆ’ ಎಂದು ಜೆಡಿಎಸ್‌ ಶಾಸಕಾಂಗ ಪ‍ಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಭಾನುವಾರ ಇಲ್ಲಿ ತಿಳಿಸಿದರು.

ತಮ್ಮ ಕ್ಷೇತ್ರಕ್ಕೆ ಅನುದಾನ ಬಂದಿಲ್ಲವೆಂದು ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ಗಲಾಟೆ ಮಾಡಿದ್ದಾರೆ. ಅದು ಸಹ ಮಂತ್ರಿಯನ್ನು ಕೂರಿಸಿಕೊಂಡು ಅನುದಾನ ಕೊಡಿ ಎಂದು ಆಗ್ರಹಿಸಿದ್ದಾರೆ ಎಂದು ಹೇಳಿದರು.

‘ದಾಖಲಾತಿ ಕೊಟ್ಟು 24 ಗಂಟೆಗಳಲ್ಲಿ ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೇಳುತ್ತಿದ್ದಾರೆ. ಕೃಷಿ ಸಚಿವ ಬಿ.ಸಿ.ಪಾಟೀಲ ಅವರಿಗೆ ಸಾಲಮನ್ನಾದ ಬಗ್ಗೆ ಮಾಹಿತಿಯೇ ಇಲ್ಲ. ನಾನು ಅಧಿಕಾರದಿಂದ ಕೆಳಗಿಳಿಯುವಾಗ ಬರೀ ಘೋಷಣೆ ಮಾಡಿಲ್ಲ. ಬದಲಿಗೆ ₹ 25 ಸಾವಿರ ಕೋಟಿ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ. ಅದರಲ್ಲಿ ₹ 800 ಕೋಟಿಯನ್ನು ಇನ್ನೂ ಬಿಡುಗಡೆ ಮಾಡದೆ ಇಟ್ಟುಕೊಂಡಿದ್ದಾರೆ. ನಾವು ರೈತರಿಂದ ಸರಳ ದಾಖಲೆ ಕೇಳಿದ್ದೆವು. ರೈತರ ದಾಖಲೆ ತಪ್ಪಿದ್ದರೆ ಸರಿಪಡಿಸುವುದು ಇಲಾಖೆಯ ಕೆಲಸ. ಅದನ್ನು ಬಿಟ್ಟು ಕೃಷಿ ಸಚಿವರು ನಾಲಿಗೆ ಇದೆ ಎಂದು ತೆವಲಿಗೆ ಸುಳ್ಳು ಹೇಳಿಕೊಂಡು ಓಡಾಡುವುದು ಬೇಡ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT