ಐ.ಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಕುಮಾರಸ್ವಾಮಿ, ಸಂಪುಟ ಸಚಿವರು ಮತ್ತು ಕಾಂಗ್ರೆಸ್ ನಾಯಕರು ತಮ್ಮ ಪಕ್ಷಗಳ ಕಾರ್ಯಕರ್ತರನ್ನು ಪ್ರಚೋದಿಸುವ ಕೆಲಸ ಮಾಡಿದ್ದಾರೆ. ಅಲ್ಲದೆ, ಮೊದಲೇ ದಾಳಿ ರಹಸ್ಯವನ್ನು ಮಾಧ್ಯಮಗಳಿಗೆ ಬಯಲು ಮಾಡುವ ಮೂಲಕ ‘ಗೋಪ್ಯತೆ ಪ್ರಮಾಣ ವಚನ’ ಸ್ವೀಕರಿಸಿದ್ದನ್ನು ಉಲ್ಲಂಘಿಸಿದ್ದಾರೆ ಎಂದಿದ್ದಾರೆ.