ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ಮಂಗಳೂರು ಬಾಂಬ್ ಪ್ರಕರಣದಲ್ಲಿ ಮಾಧ್ಯಮಗಳ ವರದಿ ಆಧರಿಸಿ ಪಟಾಕಿ ಪೌಡರ್ ಕುರಿತು ನಾನು ಹೇಳಿಕೆ ನೀಡಿದ್ದೆ. ಈ ಪ್ರಕರಣದಲ್ಲಿ ಕೆಲವು ಹಿರಿಯ ಅಧಿಕಾರಿಗಳೇ ಮಾಧ್ಯಮಗಳ ದಾರಿ ತಪ್ಪಿಸಿದರು. ಸರ್ಕಾರ ಎಲ್ಲಿ ಬಿಗಿ ಮಾಡಬೇಕಿತ್ತೋ ಅಲ್ಲಿ ಮಾಡಲಿಲ್ಲ. ಪ್ರಕರಣದಲ್ಲಿ ಸರ್ಕಾರ, ಪೊಲೀಸರ ಲೋಪ ಮುಚ್ಚಿಕೊಳ್ಳಲು ಇಂತಹದ್ದಕ್ಕೆ ಪ್ರಚಾರ ನೀಡಲಾಯಿತು. ನಾನು ಕಥೆ ಕಟ್ಟಿಲ್ಲ. ಮಾಧ್ಯಮ ವರದಿ ಆಧರಿಸಿ ಹೇಳಿಕೆ ಕೊಟ್ಟಿದ್ದೇನೆ. ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇನೆ' ಎಂದರು.