ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಮ ಮಂದಿರ, ಟಿಪ್ಪು ಜಯಂತಿ ಮತ್ತಿತರ ವಿಷಯಗಳಿಗೆ ಪ್ರಾಧಾನ್ಯ ನೀಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವುದೇ ಬಿಜೆಪಿ ಕೆಲಸವಾಗಿದೆ. ಟಿಪ್ಪು ಜಯಂತಿ ವಿರೋಧಿಸುವ ನೆಪದಲ್ಲಿ ಮಡಿಕೇರಿಯಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ. ಭೀಕರ ಮಳೆಯಾಗಿ ಕೊಡಗು ಜನ ತತ್ತರಿಸಿದ ಸಂದರ್ಭದಲ್ಲಿ ಕೇಂದ್ರದಿಂದ ಒಂದು ರೂಪಾಯಿ ಪರಿಹಾರವನ್ನೂ ತರದ ಬಿಜೆಪಿಯವರು ಜಿಲ್ಲೆಯಲ್ಲಿ ಬಂದ್ಗೆ ಕರೆ ನೀಡುತ್ತಾರೆ. ರಾಜಕೀಯ ಲಾಭಕ್ಕೆ ಅವರು ಏನು ಬೇಕಾದರೂ ಮಾಡುತ್ತಾರೆ’ ಎಂದು ಅವರು ಕಿಡಿ ಕಾರಿದರು.