ಎರಡೂ ಪಕ್ಷಗಳು ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯಡಿ ವಿಧಾನಸಭೆ ಚುನಾವಣೆ ಎದುರಿಸಿದ್ದು, ‘ಮೈತ್ರಿ’ ಮಾಡಿಕೊಂಡ ಬಳಿಕ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ಕ್ಕೆ (ಸಿಎಂಪಿ) ಒತ್ತು ನೀಡುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಂಡಿಸಿದ್ದ ಕೊನೆಯ ಬಜೆಟ್ನಲ್ಲಿ ಘೋಷಿಸಿದ ಕೆಲವು ಯೋಜನೆಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಜೊತೆಗೆ, ಪ್ರಣಾಳಿಕೆಯಲ್ಲಿರುವ ಭರವಸೆಗಳನ್ನು ಈಡೇರಿಸುವ ವಿಷಯದಲ್ಲೂ ಹಿನ್ನಡೆ ಉಂಟಾಗಿದೆ. ಈ ವಿಷಯಗಳೂ ಚರ್ಚೆಗೆ ಬರಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.