ಸುಪ್ರೀಂ ಕೋರ್ಟ್ ನಮ್ಮ ವಾದವನ್ನು ಎತ್ತಿ ಹಿಡಿಯುವ ವಿಶ್ವಾಸವಿದೆ' ಎಂದರು. ಸೋಮದೇವರ ಹಟ್ಟಿ ತಾಂಡಾದಲ್ಲಿ ವಿಶೇಷ ಪೂಜೆಗೆ ಪ್ರತಿಕ್ರಿಯಿಸಿ,'ಪ್ರಗತಿಪರನಾಗಿರುವ ನಾನು ದೇವರಿಗೆ ಕೈ ಮುಗಿಯಬಾರದೇ?, ದೇವರಿಗೆ ಕೈ ಮುಗಿಯುವುದು, ಹೋಮ ಹವನ ಮಾಡುವುದು ಬೇಡ ಅಂತ ಎಲ್ಲಿದೆ?, ಶ್ರದ್ಧಾ ಭಕ್ತಿಯಿಂದ ದೇವರಿಗೆ ನಡೆದುಕೊಳ್ಳುವುದು ನಮ್ಮಲ್ಲಿ ಬಂದಿರುವ ಪದ್ಧತಿ. ತಿಕೋಟಾದಲ್ಲಿ ಸ್ನೇಹಿತರೊಬ್ಬರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ.