‘ಮಹೇಶ್ ಶಾಸಕರಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ, ಸಚಿವರೂ ಆಗಿದ್ದಾರೆ. ಆದರೆ, ಒಂದು ಜಾತಿಯನ್ನು ಇಷ್ಟೊಂದು ದ್ವೇಷ ಮಾಡುವುದು ಸರಿಯಲ್ಲ. ಅಲ್ಲದೇ, ಒಂದೇ ಜಾತಿಯಿಂದ ಗ್ರಾಮ ಪಂಚಾಯ್ತಿ ಸದಸ್ಯನಾಗಲೂ ಸಾಧ್ಯವಿಲ್ಲ. ಆದ್ದರಿಂದ ಜಾತಿ ರಾಜಕಾರಣಕ್ಕೆ ಅಂತ್ಯ ಹಾಡಬೇಕು. ಎಲ್ಲ ಜಾತಿ, ಜನಾಂಗ ಸೇರಿದರೆ ಮಾತ್ರ ರಾಜಕಾರಣ ಮಾಡಲು ಸಾಧ್ಯವಾಗುತ್ತದೆ’ ಎಂದರು.