ಶವದ ಪಕ್ಕದಲ್ಲಿ ಸಿಕ್ಕ ಟವೆಲ್ನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ. ‘ಭವಿಷ್ಯದಲ್ಲಿ ಮಗಳ ಮದುವೆಗೆ ಹೆಚ್ಚು ಹಣ ಬೇಕಾಗುತ್ತದೆ. ನಾನು ಬಡವನಾಗಿರುವುದರಿಂದ ಆ ಮೊತ್ತ ವನ್ನು ಭರಿಸಲು ಸಾಧ್ಯವಿಲ್ಲ. ಈ ಕಾರಣ ದಿಂದ, ಮಗಳನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದೇನೆ’ ಎಂದು ಆರೋಪಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳ ವಾರ ತಿಳಿಸಿದ್ದಾರೆ.