ಹಂಪಿಯ ಚಕ್ರತೀರ್ಥ, ಪುರಂದರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಸಂಪೂರ್ಣ ಮುಳುಗಡೆಯಾಗಿವೆ. ವಿಜಯ ವಿಠಲ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ತಳವಾರಘಟ್ಟ ರಸ್ತೆ ಮೇಲೆ ನೀರು ಬಂದಿರುವುದರಿಂದ ಪ್ರವಾಸಿಗರ ವಾಹನಗಳು ಸಿಲುಕಿಕೊಂಡು ಜನ ಪರದಾಡಿದರು. ಜನರನ್ನು ಚಕ್ಕಡಿಗಳಲ್ಲಿ ಬೇರೆ ಕಡೆ ಸ್ಥಳಾಂತರಿಸಲಾಯಿತು. ಹಂಪಿಗೆ ಹೊಂದಿಕೊಂಡಂತಿರುವ ಬಾಳೆತೋಟಗಳಿಗೆ ನೀರು ನುಗ್ಗಿದ್ದು, ಇನ್ನಷ್ಟೇ ಹಾನಿಯ ಪ್ರಮಾಣ ಗೊತ್ತಾಗಬೇಕಿದೆ.