‘ನಿತ್ಯ ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹಂಪಿಗೆ ಬರುತ್ತಾರೆ. ಅಂತಹವರಲ್ಲಿ ಕೆಲವರು ರಥದ ಮೇಲೇರಿ ಛಾಯಾಚಿತ್ರ ತೆಗೆಸಿಕೊಳ್ಳುತ್ತಿದ್ದಾರೆ. ಮಕ್ಕಳನ್ನು ಅದರ ಮೇಲೆ ಕೂರಿಸುತ್ತಿದ್ದಾರೆ. ಎಲ್ಲೆಂದರಲ್ಲಿ ಕೈ ಮುಟ್ಟಿ ನೋಡುವುದು ಮಾಡುತ್ತಿದ್ದಾರೆ. ಅದರಿಂದ ಸ್ಮಾರಕಕ್ಕೆ ಧಕ್ಕೆಯಾಗಬಹುದು. ಹಾಗಾಗಿ ಅದರ ಸನಿಹ ಹೋಗದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ಮಾರಕದ ಸೌಂದರ್ಯಕ್ಕೆ ಧಕ್ಕೆಯಾಗದಂತೆ ಮೂರರಿಂದ ನಾಲ್ಕು ಅಡಿಗಳಷ್ಟು ಎತ್ತರತಡೆಗೋಡೆ ರ್ಮಿಸಲಾಗುವುದು.