ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯದ 202ನೇ ಕಾರ್ಯಕಾರಿ ಸಮಿತಿ ಸಭೆಯಲ್ಲಿ ವಿದ್ಯಾರ್ಥಿಗಳಿಂದ ದೃಢೀಕರಣ ಪತ್ರ ಬರೆಸಿಕೊಳ್ಳುವುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರ ಪ್ರಕಾರ, ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಯಾವುದೇ ರೀತಿಯ ರ್ಯಾಗಿಂಗ್, ಅಪರಾಧ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗುವಂತಿಲ್ಲ. ಸರ್ಕಾರದ ನಿಗದಿಪಡಿಸಿದ ಪ್ರೋತ್ಸಾಹ ಧನ ಹಾಗೂ ಶಿಷ್ಯ ವೇತನ ಮಾತ್ರ ನಿರೀಕ್ಷಿಸುವೆ. ವಿಶ್ವವಿದ್ಯಾಲಯದಿಂದ ಪ್ರೋತ್ಸಾಹ ಧನ, ಶಿಷ್ಯ ವೇತನ ನಿರೀಕ್ಷಿಸುವುದಿಲ್ಲ ಎಂಬ ಅಂಶ ಇದೆ. ಈ ಕುರಿತು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ₹20 ಬಾಂಡ್ನಲ್ಲಿ ಫೆ.15ರೊಳಗೆ ಬರೆದುಕೊಡಬೇಕು. ಈ ವಿಷಯವೇ ಈಗ ವಿದ್ಯಾರ್ಥಿಗಳನ್ನು ಕೆರಳಿಸಿದೆ.