ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಕಳೆದ ವರ್ಷ ₹ 15 ಕೋಟಿ ಖರ್ಚು ಮಾಡಿ ಉತ್ಸವ ನಡೆಸಲಾಗಿತ್ತು. ಆದರೆ, ಈ ಬಾರಿ ಉತ್ಸವಕ್ಕೆ ಸಿದ್ಧತೆ ಮಾಡಿಕೊಂಡಿಲ್ಲ. ಸಿದ್ಧತೆಗೆ ಒಂದು ತಿಂಗಳು ಬೇಕಾಗುತ್ತದೆ. ಆದ್ದರಿಂದ, ಮುಖ್ಯಮಂತ್ರಿ ಜತೆ ಚರ್ಚಿಸಿ ಉತ್ಸವ ನಡೆಸದಿರಲು ತೀರ್ಮಾನಿಸಲಾಯಿತು ಎಂದರು.