<p><strong>ಹಂಪಿ (ಎದುರು ಬಸವಣ್ಣ ವೇದಿಕೆ):</strong>ವಿಶ್ವವಿಖ್ಯಾತ ಹಂಪಿಯ ವಿರೂಪಾಕ್ಷೇಶ್ವರ ಗುಡಿಯ ಎದುರಿನ ವರ್ಣರಂಜಿತ ಬಸವಣ್ಣ ವೇದಿಕೆಯಲ್ಲಿ ಶನಿವಾರ ರಾತ್ರಿ ತಂಗಾಳಿಯ ನಡುವೆ ಎರಡು ದಿನಗಳ ಹಂಪಿ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ವಿಧ್ಯುಕ್ತ ಚಾಲನೆ ನೀಡಿದರು.</p>.<p>‘ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರಂತೆಯೇ ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕೃಷ್ಣದೇವರಾಯನ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿರುವ ಹಂಪಿಯಲ್ಲಿ ಜನಾಗ್ರಹದ ಮೇರೆಗೆ ಸರ್ಕಾರ ಉತ್ಸವವನ್ನು ಹಮ್ಮಿಕೊಂಡಿದೆ’ ಎಂದು ಶಿವಕುಮಾರ್ ಹೇಳಿದರು.</p>.<p>ನಟ ದರ್ಶನ್, ‘ಹಂಪಿಯಲ್ಲಿರುವಂಥ ಸ್ಮಾರಕಗಳನ್ನು ನೂರು ವರ್ಷವಾದರೂ ಕಟ್ಟಲು ಸಾಧ್ಯವಿಲ್ಲ. ಅವುಗಳನ್ನು ಎಲ್ಲರೂ ರಕ್ಷಿಸಬೇಕು’ ಎಂದರು.</p>.<p>‘ಉತ್ಸವಕ್ಕಾಗಿ ಸರ್ಕಾರ ಪ್ರತಿ ವರ್ಷ ಬಜೆಟ್ನಲ್ಲಿ ₹10 ಕೋಟಿ ಮೀಸಲಿಡಬೇಕು’ ಎಂದು ಸಂಸದ ವಿ.ಎಸ್.ಉಗ್ರಪ್ಪ ಪ್ರತಿಪಾದಿಸಿದರು.</p>.<p>ಸಂಜೆ ಬಳಿಕ ಐದು ವೇದಿಕೆಗಳಲ್ಲಿ ಆರಂಭವಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳ ಸಾವಿರಕ್ಕೂ ಹೆಚ್ಚು ಕಲಾವಿದರು ಪ್ರದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಂಪಿ (ಎದುರು ಬಸವಣ್ಣ ವೇದಿಕೆ):</strong>ವಿಶ್ವವಿಖ್ಯಾತ ಹಂಪಿಯ ವಿರೂಪಾಕ್ಷೇಶ್ವರ ಗುಡಿಯ ಎದುರಿನ ವರ್ಣರಂಜಿತ ಬಸವಣ್ಣ ವೇದಿಕೆಯಲ್ಲಿ ಶನಿವಾರ ರಾತ್ರಿ ತಂಗಾಳಿಯ ನಡುವೆ ಎರಡು ದಿನಗಳ ಹಂಪಿ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ವಿಧ್ಯುಕ್ತ ಚಾಲನೆ ನೀಡಿದರು.</p>.<p>‘ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರಂತೆಯೇ ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕೃಷ್ಣದೇವರಾಯನ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿರುವ ಹಂಪಿಯಲ್ಲಿ ಜನಾಗ್ರಹದ ಮೇರೆಗೆ ಸರ್ಕಾರ ಉತ್ಸವವನ್ನು ಹಮ್ಮಿಕೊಂಡಿದೆ’ ಎಂದು ಶಿವಕುಮಾರ್ ಹೇಳಿದರು.</p>.<p>ನಟ ದರ್ಶನ್, ‘ಹಂಪಿಯಲ್ಲಿರುವಂಥ ಸ್ಮಾರಕಗಳನ್ನು ನೂರು ವರ್ಷವಾದರೂ ಕಟ್ಟಲು ಸಾಧ್ಯವಿಲ್ಲ. ಅವುಗಳನ್ನು ಎಲ್ಲರೂ ರಕ್ಷಿಸಬೇಕು’ ಎಂದರು.</p>.<p>‘ಉತ್ಸವಕ್ಕಾಗಿ ಸರ್ಕಾರ ಪ್ರತಿ ವರ್ಷ ಬಜೆಟ್ನಲ್ಲಿ ₹10 ಕೋಟಿ ಮೀಸಲಿಡಬೇಕು’ ಎಂದು ಸಂಸದ ವಿ.ಎಸ್.ಉಗ್ರಪ್ಪ ಪ್ರತಿಪಾದಿಸಿದರು.</p>.<p>ಸಂಜೆ ಬಳಿಕ ಐದು ವೇದಿಕೆಗಳಲ್ಲಿ ಆರಂಭವಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳ ಸಾವಿರಕ್ಕೂ ಹೆಚ್ಚು ಕಲಾವಿದರು ಪ್ರದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>