ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಅಂಗವಿಕಲ ನೌಕರರಿಗೆ ಕೆಲಸದಿಂದ ವಿನಾಯಿತಿ ನೀಡಿ'

Last Updated 11 ಜುಲೈ 2020, 8:26 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಅಂಧ-ಅಂಗವಿಕಲ ನೌಕರರಿಗೆ ಕಚೇರಿಗೆ ಹಾಜರಾಗಲು ವಿನಾಯಿತಿ ನೀಡುವಂತೆ ರಾಜ್ಯ ಸರ್ಕಾರಿ ಅಂಧ ನೌಕರರ ಸಂಘ ಒತ್ತಾಯಿಸಿದೆ.

‘ಸರ್ಕಾರದ ವಿವಿಧ ಇಲಾಖೆಗಳು, ನಿಗಮ, ಮಂಡಳಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗವಿಕಲ ನೌಕರರು ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸಲು ಅಡೆತಡೆಗಳು ಸಾಕಷ್ಟಿವೆ. ಈ ಪರಿಸ್ಥಿತಿಯಲ್ಲಿ ಕಚೇರಿಗೆ ತೆರಳಿ ಕೆಲಸ ಮಾಡುವುದು ಸವಾಲಿನ ಕೆಲಸ. ಹಾಗಾಗಿ ಅಂಗವಿಕಲರಿಗೆ ಕಚೇರಿಗೆ ಹಾಜರಾಗಲು ವೇತನ ಸಹಿತ ವಿನಾಯಿತಿ ನೀಡಬೇಕು’ ಎಂದು ಸಂಘದ ಅಧ್ಯಕ್ಷ ರಮೇಶ್ ಸಂಕರೆಡ್ಡಿ ಒತ್ತಾಯಿಸಿದ್ದಾರೆ.

‘ನೌಕರರ ಸುರಕ್ಷತೆಯನ್ನು ಖಾತ್ರಿಪಡಿಸುವ ಮಾರ್ಗದರ್ಶಿ ನಿಯಮಾವಳಿಗಳನ್ನು ಯಾವುದೇ ಇಲಾಖೆ ಪ್ರಕಟಿಸಿಲ್ಲ. ಮನೆಯಿಂದಲೇ ನಿರ್ವಹಿಸಬಹುದಾದ ಕೆಲಸಗಳಿಗೆ ಅಂಗವಿಕಲರನ್ನು ನಿಯೋಜಿಸಬಹುದು. ಈಗಾಗಲೇ ವಿವಿಧ ಬ್ಯಾಂಕ್‍ಗಳ ಅಂಧ ನೌಕರರಿಗೆ ಕಚೇರಿ ಕೆಲಸದಿಂದ ವಿನಾಯಿತಿ ನೀಡಿದ್ದು, ಸರ್ಕಾರಿ ಅಂಗವಿಕಲ ನೌಕರರಿಗೂ ವಿನಾಯಿತಿ ಘೋಷಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT