‘ಸರ್ಕಾರದ ವಿವಿಧ ಇಲಾಖೆಗಳು, ನಿಗಮ, ಮಂಡಳಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಂಗವಿಕಲ ನೌಕರರು ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸಲು ಅಡೆತಡೆಗಳು ಸಾಕಷ್ಟಿವೆ. ಈ ಪರಿಸ್ಥಿತಿಯಲ್ಲಿ ಕಚೇರಿಗೆ ತೆರಳಿ ಕೆಲಸ ಮಾಡುವುದು ಸವಾಲಿನ ಕೆಲಸ. ಹಾಗಾಗಿ ಅಂಗವಿಕಲರಿಗೆ ಕಚೇರಿಗೆ ಹಾಜರಾಗಲು ವೇತನ ಸಹಿತ ವಿನಾಯಿತಿ ನೀಡಬೇಕು’ ಎಂದು ಸಂಘದ ಅಧ್ಯಕ್ಷ ರಮೇಶ್ ಸಂಕರೆಡ್ಡಿ ಒತ್ತಾಯಿಸಿದ್ದಾರೆ.