‘ಆ.23ರಂದು ಉಚ್ಚಂಗಿದುರ್ಗದ ಉಚ್ಚೆಂಗೆಮ್ಮ ದೇವಸ್ಥಾನದಲ್ಲಿ ಪ್ರಕರಣ ನಡೆದಿರುವ ಬಗ್ಗೆ ಅನುಮಾನವಿದೆ. ಐದಾರು ದಿನಗಳಿಂದ ಯುವತಿಯ ಮನೆಗೆ ಹೋಗಿ, ಪೋಷಕರು, ಸುತ್ತಮುತ್ತಲಿನ ಜನರನ್ನು ವಿಚಾರಿಸಿದಾಗ ದೇವದಾಸಿ ಪದ್ಧತಿಗೆ ನೂಕಿರುವುದು ಖಚಿತವಾಗಿದೆ. ಈ ಅನಿಷ್ಟ ಪದ್ಧತಿಯನ್ನು ಬೆಂಬಲಿಸಿದವರಿಗೆ ತಕ್ಕ ಶಿಕ್ಷೆ ಆಗಬೇಕು’ ಎಂದು ದೇವದಾಸಿ ಮಹಿಳಾ ವಿಮೋಚನಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ಟಿ.ವಿ. ರೇಣುಕಮ್ಮ ಒತ್ತಾಯಿಸಿದ್ದಾರೆ.