ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ: ಹುಬ್ಬಳ್ಳಿಯಲ್ಲಿ ಮಲೆನಾಡಿನ ಅನುಭವ; ಬೆಳಗಾವಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

Last Updated 10 ಜೂನ್ 2018, 10:20 IST
ಅಕ್ಷರ ಗಾತ್ರ

ಹುಬ್ಬಳ್ಳಿ, ಬೆಳಗಾವಿ: ರಾಜ್ಯದಲ್ಲಿ ಭಾನುವಾರ ಮಳೆ ಮುಂದುವರಿದ್ದು, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಬೀಳುತ್ತಿದೆ. ಹುಬ್ಬಳ್ಳಿಯಲ್ಲಿ ಮಳೆ ಮಲೆನಾಡಿನ ಅನುಭವ ನೀಡಿದ್ದರೆ, ಬೆಳಗಾವಿಯಲ್ಲಿ ಮಳೆಗೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ.

ಭರ್ಜರಿ ಮಳೆ; ಮಲೆನಾಡಿನ ಅನುಭವ
ಹುಬ್ಬಳ್ಳಿ ವರದಿ:
ಹುಬ್ಬಳ್ಳಿಯಲ್ಲಿ ಬೆಳಿಗ್ಗೆಯಿಂದಲೇ ಸುರಿಯುತ್ತಿರುವ ಭರ್ಜರಿ ಮಳೆ, ‌ಮಲೆನಾಡಿನ ಅನುಭವ ಉಂಟು ಮಾಡಿದೆ. ಎದುರಿನ‌ ರಸ್ತೆ ಕಣ್ಣಿಗೆ ‌ಕಾಣದಷ್ಟು ಮಳೆ ಹನಿಗಳ ‌ಅಬ್ಬರವಿತ್ತು.

ಸಂಚಾರಕ್ಕೆ ಅಡ್ಡಿ
ಬೆಳಗಾವಿ ವರದಿ:
ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆ ಇನ್ನೂ ಮುಂದುವರೆದಿದೆ. ಇಲ್ಲಿನ ಹಿಂಡಲಗಾ ರಸ್ತೆ ಬಳಿ ಮರ ಉರುಳಿ ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ.

ಹೊಸಪೇಟೆಯಲ್ಲಿ ಬೆಳಿಗ್ಗೆಯಿಂದ ಕಾರ್ಮೋಡ ಕವಿದಿತ್ತು. ಮಧ್ಯಾಹ್ನದಿಂದ ಬಿರುಸಿನ ಮಳೆ ಬೀಳಲಾರಂಭಿಸಿದೆ. ದಾವಣಗೆರೆಯಲ್ಲಿ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆ ಮುಂದುವರಿದಿದೆ. ಬಿಟ್ಟು ಬಿಟ್ಟು ಮಳೆ ಸುರಿಯುತ್ತಿರುವುದರಿಂದ ಅಂತಹ ಆತಂಕ ಇಲ್ಲ.

ಹುಬ್ಬಳ್ಳಿಯಲ್ಲಿ ಸುರಿಯುತ್ತಿರುವ ಭರ್ಜರಿ ಮಳೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT