ಈ ಸಂದರ್ಭ ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ‘ಲಭ್ಯವಿರುವ ಎಲ್ಲ ತಂತ್ರಜ್ಞಾನಗಳನ್ನು ಬಳಸಿ ಮೀನುಗಾರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಆದರೂ ಯಾವ ಸುಳಿವು ಸಿಕ್ಕಿಲ್ಲ. ಅಗತ್ಯಬಿದ್ದರೆ ಮೀನುಗಾರರನ್ನು ಜತೆಗೇ ಕರೆದುಕೊಂಡು ಹೋಗಿ ಮತ್ತೊಂದು ಸುತ್ತಿನ ಕಾರ್ಯಾಚರಣೆ ನಡೆಸುತ್ತೇವೆ. ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧವಿದೆ’ ಎಂದರು