ರಾಮಚಂದ್ರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಜಿ.ಆರ್. ಗುರುಮಠ ಅವರು, 'ಈಗಾಗಲೇ ದಾವಣಗೆರೆ ಜಿಲ್ಲಾ ಜಾತಿ ಪ್ರಮಾಣಪತ್ರದ ಸಿಂಧುತ್ವ ಪರಿಶೀಲನಾ ಸಮಿತಿಯು, ರಾಮಚಂದ್ರ ಅವರು ವಾಲ್ಮೀಕಿ ಜನಾಂಗಕ್ಕೆ ಸೇರಿದವರಾಗಿದ್ದಾರೆ ಎಂದು ಪ್ರಮಾಣ ಪತ್ರ ನೀಡಿದೆ. ಆದ್ದರಿಂದ, ಈ ಅರ್ಜಿಯನ್ನು ವಿಚಾರಣೆ ನಡೆಸುವ ಅವಶ್ಯಕತೆ ಇಲ್ಲ' ಎಂದು ಕೋರಿದ್ದರು.