ಬೇಲೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಸ್ಥಾನ ಬಿಟ್ಟುಕೊಡುವ ಸಲುವಾಗಿ, ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಈಗಲೂ ತಾವು ಬದ್ಧವಿರುವುದಾಗಿ ಪ್ರಜ್ವಲ್ ರೇವಣ್ಣ ಸೋಮವಾರ ಇಲ್ಲಿ ತಿಳಿಸಿದರು.
‘ನೀರಾವರಿ ಹಾಗೂ ಇನ್ನಿತರ ಹೋರಾಟದ ವಿಚಾರದಲ್ಲಿ ಮಾತನಾಡಲು ದೇವೇಗೌಡರು ಲೋಕಸಭೆಯಲ್ಲಿರಬೇಕು. ಜೂನ್ 4 ರಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರ ನಿಯೋಗವನ್ನು ಅವರ ಬಳಿಗೆ ಕರೆದುಕೊಂಡು ಹೋಗಿ ಮನವೊಲಿಸಲಾಗುವುದು’ ಎಂದರು.
‘ಪಕ್ಷ ತೊರೆಯಲ್ಲ’ ಬೇಲೂರು: ‘ಜೆಡಿಎಸ್ ತೊರೆದು ಬಿಜೆಪಿ ಸೇರುವುದಾಗಿ ಕೆಲವು ಮಾಧ್ಯಮಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ. ಆದರೆ, ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ’ ಎಂದು ಶಾಸಕ ಕೆ.ಎಸ್.ಲಿಂಗೇಶ್ ಸೋಮವಾರ ಇಲ್ಲಿ ತಿಳಿಸಿದರು.