ಬೆಂಗಳೂರು: ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಸಂಕಲ್ಪ ಹಾಗೂ ಸಂಯಮದಿಂದ ಕೊರೊನಾ ವೈರಸ್ ಅನ್ನು ಎದುರಿಸಬೇಕು ಎಂಬ ಪ್ರಧಾನಿಯವರ ಮಾತು ಪಾಲನೆಗೆ ಯೋಗ್ಯವಾಗಿದ್ದು, ಮಾರ್ಚ್ 22 ಭಾನುವಾರದಂದು ಪ್ರಧಾನಿಕರೆ ನೀಡಿರುವ 'ಜನತಾ ಕರ್ಫ್ಯೂ'ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.