ಬೆಳಗಾವಿ: ತಾವೇನು ರಾಜಕೀಯ ಸನ್ಯಾಸಿಯಲ್ಲ; ಹೈಕಮಾಂಡ್ ಹಾಗೂ ಶಾಸಕರು ಹೇಳಿದರೆ ತಾವೂ ಮುಖ್ಯಮಂತ್ರಿ ಆಗುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಶುಕ್ರವಾರ ಇಲ್ಲಿ ಹೇಳಿದರು.
ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ತಮ್ಮ ಗುರಿ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಶಾಸಕರು ನಿರ್ಧರಿಸುತ್ತಾರೆ. ಆದರೆ, ಯಾರು ಬೇಕಾದರೂ ಆ ಸ್ಥಾನದ ಆಕಾಂಕ್ಷಿ ಎಂದು ಹೇಳಿಕೊಂಡು ತಿರುಗಾಡಬಹುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
‘ನಮಗೆ ಹೈಕಮಾಂಡೇ ಎಲ್ಲ; ಎಲ್ಲವನ್ನೂ ತೀರ್ಮಾನಿಸುವ ಯಜಮಾನ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.