‘ಸೋನಿಯಾಗಾಂಧಿ ವಿಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿ ಸ್ಪರ್ಧಿಸುವಂತೆ ಮನವಿ ಮಾಡಿದರು. ಬಿಜೆಪಿಯಲ್ಲೂ ಮೂರನೇ ಅಭ್ಯರ್ಥಿಯಾಗಲು ಹಲವರು ಆಸಕ್ತಿ ಹೊಂದಿದ್ದರೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿಲ್ಲ. ಇದನ್ನು ಅರವಿಂದ ಲಿಂಬಾವಳಿ ಹೇಳಿದ್ದರು. ಇದರ ಹೊರತಾಗಿ ಬಿಜೆಪಿಯ ಯಾರೂ ನನ್ನನ್ನು ಭೇಟಿ ಮಾಡಲಿಲ್ಲ. ಎರಡೂ ಪಕ್ಷಗಳಿಗೂ ಋಣಿ’ ಎಂದು ದೇವೇಗೌಡ ಸುದ್ದಿಗಾರರಿಗೆ ತಿಳಿಸಿದರು.