ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಕರೆ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು, ಜಾಗ್ರತೆ ವಹಿಸುವಂತೆ ಸಲಹೆ ನೀಡಿದರು.
ಈ ವೇಳೆ ಯಡಿಯೂರಪ್ಪನವರೂ ಕೂಡ ಕುಮಾರಸ್ವಾಮಿಯವರಿಗೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದರು.