<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<p><strong>ಬೆಂಗಳೂರು: </strong>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರ ಪುತ್ರಿ ರಕ್ಷಿತಾ ಮತ್ತು ಹೈದರಾಬಾದ್ನ ಉದ್ಯಮಿ ಲಲಿತ್ ಸಂಜೀವ್ ರೆಡ್ಡಿ ಅವರ ವಿವಾಹ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಜರುಗಿತು.</p>.<figcaption>ವಧು ವರರಾದ ರಕ್ಷಿತಾ ಮತ್ತು ಲಲಿತ್ ಸಂಜೀವ್ ರೆಡ್ಡಿ</figcaption>.<p>ನೂತನ ದಂಪತಿಗೆ ರಾಜಕಾರಣಿಗಳು, ಉದ್ಯಮಿಗಳು, ಸೆಲೆಬ್ರೆಟಿಗಳು ಶುಭ ಕೋರಿದರು. ಬದ್ಧ ವೈರಿಗಳೆನಿಸಿದವರೂ ಆರತಕ್ಷತೆಯ ವೇದಿಕೆಯ ಮೇಲೆ ಒಂದಾಗಿ ಫೊಟೊ ತೆಗೆಸಿಕೊಂಡಿದ್ದು ಈ ವಿವಾಹ ಸಮಾರಂಭದ ವಿಶೇಷವಾಗಿತ್ತು.</p>.<figcaption>ಸಚಿವ ಶ್ರೀರಾಮುಲು ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಕುಟುಂಬ</figcaption>.<p>ಶ್ರೀರಾಮುಲು ಪುತ್ರಿ ವಿವಾಹ ಸಮಾರಂಭದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರೂ ಕುಟುಂಬ ಸದಸ್ಯರಂತೆಯೇ ಆಗಿದ್ದರು.</p>.<figcaption>ವಿವಾಹ ಸಮಾರಂಭದಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ಒಟ್ಟಿಗೆ ಫೊಟೊ ತೆಗೆಸಿಕೊಂಡ ಕ್ಷಣ</figcaption>.<p>ಇದೇ ಹೊತ್ತಿನಲ್ಲೇ ವಿವಾಹಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ರೆಡ್ಡಿ ಅವರನ್ನು ಎದುರುಗೊಂಡರು. ಇಬ್ಬರು ಖುಷಿಯಿಂದಲೇ ಮಾತನಾಡುತ್ತಾ ಫೊಟೊ ತೆಗೆಸಿಕೊಂಡರು. ಕುಮಾರಸ್ವಾಮಿ ಅವರ ವಿರುದ್ಧ ರೆಡ್ಡಿ 150 ಕೋಟಿ ಗಣಿ ಲಂಚದ ಆರೋಪ ಮಾಡಿದ್ದರು.</p>.<figcaption>ವಿವಾಹ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಜನಾರ್ದನ ರೆಡ್ಡಿ</figcaption>.<p>ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ವಿವಾಹಕ್ಕೆ ಆಗಮಿಸಿದ್ದರು. ಅಲ್ಲೆ ಇದ್ದ ರೆಡ್ಡಿ ಅವರನ್ನು ಸಿದ್ದರಾಮಯ್ಯ ಖುಷಿಯಿಂದಲೇ ಮಾತನಾಡಿಸಿದರು. ಸಂದರ್ಶನವೊಂದರಲ್ಲಿ ಮಾತನಾಡುತ್ತಾ ರೆಡ್ಡಿ ಅವರು ಸಿದ್ದರಾಮಯ್ಯ ಅವರ ಪುತ್ರನ ಸಾವಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು.</p>.<figcaption>ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆಶೀರ್ವಾದ ಪಡೆದ ನವ ದಂಪತಿ</figcaption>.<p>ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ,ಮಾಜಿ ಸಚಿವ ಡಿ.ಕೆ ಶಿವಕುಮಾರ್, ಎಚ್.ಡಿ ರೇವಣ್ಣ ಅವರೂ ವಿವಾಹಕ್ಕೆ ಆಗಮಿಸಿ ನೂತನ ದಂಪತಿಗೆ ಶುಭ ಕೋರಿದರು.</p>.<figcaption>ವಿವಾಹಕ್ಕೆ ಆಗಮಿಸಿ ವಧು ವರರಿಗೆ ಶುಭ ಕೋರಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್</figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<figcaption>""</figcaption>.<p><strong>ಬೆಂಗಳೂರು: </strong>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರ ಪುತ್ರಿ ರಕ್ಷಿತಾ ಮತ್ತು ಹೈದರಾಬಾದ್ನ ಉದ್ಯಮಿ ಲಲಿತ್ ಸಂಜೀವ್ ರೆಡ್ಡಿ ಅವರ ವಿವಾಹ ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಜರುಗಿತು.</p>.<figcaption>ವಧು ವರರಾದ ರಕ್ಷಿತಾ ಮತ್ತು ಲಲಿತ್ ಸಂಜೀವ್ ರೆಡ್ಡಿ</figcaption>.<p>ನೂತನ ದಂಪತಿಗೆ ರಾಜಕಾರಣಿಗಳು, ಉದ್ಯಮಿಗಳು, ಸೆಲೆಬ್ರೆಟಿಗಳು ಶುಭ ಕೋರಿದರು. ಬದ್ಧ ವೈರಿಗಳೆನಿಸಿದವರೂ ಆರತಕ್ಷತೆಯ ವೇದಿಕೆಯ ಮೇಲೆ ಒಂದಾಗಿ ಫೊಟೊ ತೆಗೆಸಿಕೊಂಡಿದ್ದು ಈ ವಿವಾಹ ಸಮಾರಂಭದ ವಿಶೇಷವಾಗಿತ್ತು.</p>.<figcaption>ಸಚಿವ ಶ್ರೀರಾಮುಲು ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಕುಟುಂಬ</figcaption>.<p>ಶ್ರೀರಾಮುಲು ಪುತ್ರಿ ವಿವಾಹ ಸಮಾರಂಭದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರೂ ಕುಟುಂಬ ಸದಸ್ಯರಂತೆಯೇ ಆಗಿದ್ದರು.</p>.<figcaption>ವಿವಾಹ ಸಮಾರಂಭದಲ್ಲಿ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮತ್ತು ಜನಾರ್ದನ ರೆಡ್ಡಿ ಒಟ್ಟಿಗೆ ಫೊಟೊ ತೆಗೆಸಿಕೊಂಡ ಕ್ಷಣ</figcaption>.<p>ಇದೇ ಹೊತ್ತಿನಲ್ಲೇ ವಿವಾಹಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ರೆಡ್ಡಿ ಅವರನ್ನು ಎದುರುಗೊಂಡರು. ಇಬ್ಬರು ಖುಷಿಯಿಂದಲೇ ಮಾತನಾಡುತ್ತಾ ಫೊಟೊ ತೆಗೆಸಿಕೊಂಡರು. ಕುಮಾರಸ್ವಾಮಿ ಅವರ ವಿರುದ್ಧ ರೆಡ್ಡಿ 150 ಕೋಟಿ ಗಣಿ ಲಂಚದ ಆರೋಪ ಮಾಡಿದ್ದರು.</p>.<figcaption>ವಿವಾಹ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಜನಾರ್ದನ ರೆಡ್ಡಿ</figcaption>.<p>ಮಾಜಿ ಸಿಎಂ ಸಿದ್ದರಾಮಯ್ಯ ಅವರೂ ವಿವಾಹಕ್ಕೆ ಆಗಮಿಸಿದ್ದರು. ಅಲ್ಲೆ ಇದ್ದ ರೆಡ್ಡಿ ಅವರನ್ನು ಸಿದ್ದರಾಮಯ್ಯ ಖುಷಿಯಿಂದಲೇ ಮಾತನಾಡಿಸಿದರು. ಸಂದರ್ಶನವೊಂದರಲ್ಲಿ ಮಾತನಾಡುತ್ತಾ ರೆಡ್ಡಿ ಅವರು ಸಿದ್ದರಾಮಯ್ಯ ಅವರ ಪುತ್ರನ ಸಾವಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು.</p>.<figcaption>ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಆಶೀರ್ವಾದ ಪಡೆದ ನವ ದಂಪತಿ</figcaption>.<p>ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ,ಮಾಜಿ ಸಚಿವ ಡಿ.ಕೆ ಶಿವಕುಮಾರ್, ಎಚ್.ಡಿ ರೇವಣ್ಣ ಅವರೂ ವಿವಾಹಕ್ಕೆ ಆಗಮಿಸಿ ನೂತನ ದಂಪತಿಗೆ ಶುಭ ಕೋರಿದರು.</p>.<figcaption>ವಿವಾಹಕ್ಕೆ ಆಗಮಿಸಿ ವಧು ವರರಿಗೆ ಶುಭ ಕೋರಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್</figcaption>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>