ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಬಂಡೆದಿದ್ದ 17 ಶಾಸಕರು ಅನರ್ಹತೆಗೆ ಗುರಿಯಾಗಿದ್ದು, ಅವರ ಕ್ಷೇತ್ರಗಳಲ್ಲಿ ಉಪ ಚುನಾವಣೆ ಎದುರಾಗಿತ್ತು. ಆದರೆ, ಚುನಾವಣೆಗೆ ಸುಪ್ರೀಂ ಕೋರ್ಟ್ ಗುರುವಾರವಷ್ಟೇ ತಡೆ ನೀಡಿದೆ. ಹೀಗಾಗಿ ಅನರ್ಹತೆಯ ಹಣೆ ಪಟ್ಟಿ ಮುಂದುವರಿದೆ. ಇದೇ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.