<p><strong>ಬೆಂಗಳೂರು:</strong> ‘ಕೊರೊನಾ ಪರಿಹಾರವಾಗಿ ರಾಜ್ಯ ಸರ್ಕಾರ ₹ 1,610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿರುವುದು ಕೇವಲ ಪ್ರಚಾರಕಷ್ಟೇ. ಅದರಿಂದ ಬಡವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆ ಭಾನುವಾರ ಮಾತನಾಡಿದ ಅವರು, ‘ಕೊರೊನಾ ವಿಚಾರದಲ್ಲಿ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆದರೆ, ಇದು ಕೇವಲ ಮೋಸದ ಪರಿಹಾರ’ ಎಂದು ಟೀಕಿಸಿದರು.</p>.<p>‘ನೆರೆ ಹಾವಳಿ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ್ದ ಪರಿಹಾರ ಫಲಾನುಭವಿಗಳಿಗೆ ತಲುಪಿಲ್ಲ. ಈ ಹಿಂದೆ ಮೋಸ ಮಾಡಿದ ರೀತಿಯಲ್ಲಿಯೇ ಈ ಪರಿಹಾರ ಕೂಡಾ ಮುಂದುವರಿದಿದೆ’ ಎಂದು ಆರೋಪಿಸಿದರು.</p>.<p>‘ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡುವಾಗ ಮಾರ್ಗಸೂಚಿಯನ್ನು ಮೊದಲೇ ಮಾಡಿದ್ದೆವು. ಅದರಿಂದ ರೈತರಿಗೆ ಅನುಕೂಲವಾಯಿತು. ಆದರೆ, ಯಡಿಯೂರಪ್ಪ ಘೋಷಿಸಿರುವ ಪರಿಹಾರ ಯಾರಿಗೆ ಹೇಗೆ ತಲುಪಲಿದೆ ಎಂಬ ಮಾಹಿತಿಯೇ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೊರೊನಾ ಪರಿಹಾರವಾಗಿ ರಾಜ್ಯ ಸರ್ಕಾರ ₹ 1,610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿರುವುದು ಕೇವಲ ಪ್ರಚಾರಕಷ್ಟೇ. ಅದರಿಂದ ಬಡವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.</p>.<p>ಮಾಧ್ಯಮ ಪ್ರತಿನಿಧಿಗಳ ಜೊತೆ ಭಾನುವಾರ ಮಾತನಾಡಿದ ಅವರು, ‘ಕೊರೊನಾ ವಿಚಾರದಲ್ಲಿ ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆದರೆ, ಇದು ಕೇವಲ ಮೋಸದ ಪರಿಹಾರ’ ಎಂದು ಟೀಕಿಸಿದರು.</p>.<p>‘ನೆರೆ ಹಾವಳಿ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ್ದ ಪರಿಹಾರ ಫಲಾನುಭವಿಗಳಿಗೆ ತಲುಪಿಲ್ಲ. ಈ ಹಿಂದೆ ಮೋಸ ಮಾಡಿದ ರೀತಿಯಲ್ಲಿಯೇ ಈ ಪರಿಹಾರ ಕೂಡಾ ಮುಂದುವರಿದಿದೆ’ ಎಂದು ಆರೋಪಿಸಿದರು.</p>.<p>‘ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡುವಾಗ ಮಾರ್ಗಸೂಚಿಯನ್ನು ಮೊದಲೇ ಮಾಡಿದ್ದೆವು. ಅದರಿಂದ ರೈತರಿಗೆ ಅನುಕೂಲವಾಯಿತು. ಆದರೆ, ಯಡಿಯೂರಪ್ಪ ಘೋಷಿಸಿರುವ ಪರಿಹಾರ ಯಾರಿಗೆ ಹೇಗೆ ತಲುಪಲಿದೆ ಎಂಬ ಮಾಹಿತಿಯೇ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>