ಮಂಡ್ಯ: ‘ಹುತಾತ್ಮ ಯೋಧ ಎಚ್.ಗುರು ಪತ್ನಿ ಕಲಾವತಿ ಅವರಿಗೆ ಬೆಂಗಳೂರಿಗೆ ಬರುವಂತೆ ತಿಳಿಸಿದ್ದೇನೆ. ಗುರುವಾರವೇ ಸರ್ಕಾರಿ ಕೆಲಸ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬುಧವಾರ ಹೇಳಿದರು.
ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ₹ 5 ಸಾವಿರ ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಯೋಧನ ಪತ್ನಿಯನ್ನು ವೇದಿಕೆಗೆ ಕರೆದು ಈ ಮಾಹಿತಿ ನೀಡಿದರು.