<p><strong>ಬೆಂಗಳೂರು:</strong>ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನಡೆಸಿದ ಮೂರು ಗ್ರಾಮ ವಾಸ್ತವ್ಯಗಳ ಸಂದರ್ಭದಲ್ಲಿ ಆರೋಗ್ಯ ಮತ್ತಿತರ ಸಮಸ್ಯೆಗಳ ಕುರಿತು ಸಲ್ಲಿಸಿದ ಅಹವಾಲುಗಳ ಪೈಕಿ 89 ಜನರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹70.60 ಲಕ್ಷ ನೆರವು ನೀಡಲಾಗಿದೆ.</p>.<p>ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ 45 ಅರ್ಜಿ ದಾರರಿಗೆ ₹32.70 ಲಕ್ಷ, ರಾಯಚೂರು ಜಿಲ್ಲೆಯ ಕರೆಗುಡ್ಡ ಗ್ರಾಮದಲ್ಲಿ 28 ಜನರಿಗೆ ₹ 19.94 ಲಕ್ಷ ಹಾಗೂ ಬೀದರ್ ಜಿಲ್ಲೆಯ ಉಜಳಂಬ ಗ್ರಾಮದಲ್ಲಿ 16 ಜನರಿಗೆ ₹ 18.79 ಲಕ್ಷನೆರವು ನೀಡಲು ಮುಖ್ಯಮಂತ್ರಿಗಳು ಮಂಜೂರಾತಿ ನೀಡಿದ್ದಾರೆ.</p>.<p>ಇವರು ಮೂತ್ರಪಿಂಡ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆ ಮತ್ತಿತರ ವೈದ್ಯಕೀಯ ಸೌಲಭ್ಯಗಳು ಹಾಗೂ ಆರ್ಥಿಕ ನೆರವು ಕೋರಿ ಅರ್ಜಿ ಸಲ್ಲಿಸಿದ್ದರು.</p>.<p>ಈ ಮಧ್ಯೆ, ಮುಖ್ಯಮಂತ್ರಿ ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. 35 ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಕ್ರಮಕ್ಕಾಗಿ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನಡೆಸಿದ ಮೂರು ಗ್ರಾಮ ವಾಸ್ತವ್ಯಗಳ ಸಂದರ್ಭದಲ್ಲಿ ಆರೋಗ್ಯ ಮತ್ತಿತರ ಸಮಸ್ಯೆಗಳ ಕುರಿತು ಸಲ್ಲಿಸಿದ ಅಹವಾಲುಗಳ ಪೈಕಿ 89 ಜನರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹70.60 ಲಕ್ಷ ನೆರವು ನೀಡಲಾಗಿದೆ.</p>.<p>ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ 45 ಅರ್ಜಿ ದಾರರಿಗೆ ₹32.70 ಲಕ್ಷ, ರಾಯಚೂರು ಜಿಲ್ಲೆಯ ಕರೆಗುಡ್ಡ ಗ್ರಾಮದಲ್ಲಿ 28 ಜನರಿಗೆ ₹ 19.94 ಲಕ್ಷ ಹಾಗೂ ಬೀದರ್ ಜಿಲ್ಲೆಯ ಉಜಳಂಬ ಗ್ರಾಮದಲ್ಲಿ 16 ಜನರಿಗೆ ₹ 18.79 ಲಕ್ಷನೆರವು ನೀಡಲು ಮುಖ್ಯಮಂತ್ರಿಗಳು ಮಂಜೂರಾತಿ ನೀಡಿದ್ದಾರೆ.</p>.<p>ಇವರು ಮೂತ್ರಪಿಂಡ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆ ಮತ್ತಿತರ ವೈದ್ಯಕೀಯ ಸೌಲಭ್ಯಗಳು ಹಾಗೂ ಆರ್ಥಿಕ ನೆರವು ಕೋರಿ ಅರ್ಜಿ ಸಲ್ಲಿಸಿದ್ದರು.</p>.<p>ಈ ಮಧ್ಯೆ, ಮುಖ್ಯಮಂತ್ರಿ ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. 35 ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಕ್ರಮಕ್ಕಾಗಿ ಕಳುಹಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>