‘ಕಾಂಗ್ರೆಸ್, ಬಿಜೆಪಿ ಯಾವ ಕ್ಷೇತ್ರಗಳಲ್ಲಿ ಶಕ್ತಿ ಬೆಳೆಸಿಕೊಳ್ಳಲು ಆಗಲಿಲ್ಲವೋ ಅಲ್ಲಿ ನಮ್ಮ ಶಾಸಕರ ತಲೆ ಕೆಡಿಸಿ ಕರೆದುಕೊಂಡು ಪಕ್ಷ ಬೆಳೆಸಲು ಹೊರಟಿದ್ದಾರೆ. ಆದರೆ ನಮ್ಮ ಕಾರ್ಯಕರ್ತರು ಹೊಸ ನಾಯಕನನ್ನು ಹುಡುಕಿಕೊಳ್ಳುತ್ತಾರೆ’ ಎಂದರು. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ‘ದೆಹಲಿಯಲ್ಲಿ ಗಲಭೆ ನಡೆದು ಅಮಾಯಕರು ಬಲಿಯಾದರು. ಈ ಬಗ್ಗೆ ನ್ಯಾಯಮೂರ್ತಿಗಳು ಕೇಂದ್ರದ ವಿರುದ್ಧ ಪ್ರತಿಕ್ರಿಯೆ ನೀಡಿದ್ದರು. ಅದಕ್ಕಾಗಿ ವರ್ಗಾವಣೆ ಮಾಡಿದ್ದಾರೆ’ ಎಂದರು.