ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದಗಂಗಾ ಶ್ರೀಗಳ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ 

Last Updated 4 ಜನವರಿ 2019, 9:45 IST
ಅಕ್ಷರ ಗಾತ್ರ

ತುಮಕೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, 'ಶ್ರೀಗಳ ಆರೋಗ್ಯ ಸುಧಾರಣೆಗಾಗಿ ವೈದ್ಯರು ಉತ್ತಮವಾಗಿ ಕಾರ್ಯ‌ನಿರ್ವಹಿಸಿದ್ದಾರೆ. ವೈದ್ಯರ ತಂಡಕ್ಕೆ ಭಕ್ತರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಶಿವಕುಮಾರ ಶ್ರೀಗಳು ಇಳಿ ವಯಸ್ಸಿನಲ್ಲಿ ಚಿಕಿತ್ಸೆ ಸ್ಪಂದಿಸುತ್ತಿರುವುದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮತ್ತು ಪವಾಡ ಸದೃಶವಾಗಿದೆ ಎಂದರು.

ಭಕ್ತರು ಶ್ರೀಗಳ ಆರೋಗ್ಯ ದೃಷ್ಠಿಯಿಂದ ಭೇಟಿ ಮಾಡಬಾರದು ಎಂದು ಮನವಿ ಮಾಡುತ್ತೇನೆ ಎಂದರು.

ನಾನೂ ಕೂಡಾ ಬಂದರೆ ತೊಂದರೆ ಆಗುತ್ತದೆ ಎಂದು ಕೊಂಡೆ. ಕಿರಿಯ ಶ್ರೀಗಳ ಅನುಮತಿ ಪಡೆದು ಭೇಟಿ ನೀಡಿದ್ದೇನೆ ಎಂದರು.

ಧಾರವಾಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ಮಾರ್ಗ ಮಧ್ಯೆ ಶ್ರೀಗಳ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದು ತೆರಳೋಣ ಅಂತ ಬಂದಿದ್ದೇನೆ. ಸ್ವಾಮೀಜಿಯವರು ಆರೋಗ್ಯವಾಗಿದ್ದು, ಯಾವುದೇ ಆತಂಕ‌ಬೇಡ ಎಂದು ತಿಳಿಸಿದರು.

ಸಚಿವ ಎಸ್.ಆರ್. ಶ್ರೀನಿವಾಸ, ಶಾಸಕ ಜಿ.ಬಿ. ಜ್ಯೋತಿಗಣೇಶ, ಮಾಜಿ ಸಚಿವ ಸೊಗಡು ಶಿವಣ್ಣ, ಮಾಜಿ ಶಾಸಕ ನಿಂಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT